ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಪತ್ರ ವಿತರಿಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya distributes appointment letters to Anganwadi workers
ಸವದತ್ತಿ 03: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಶಾಸಕ ವಿಶ್ವಾಸ ವೈದ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಅಧಿಕೃತವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಅವರು ಮಾತನಾಡಿ ಅಂಗನವಾಡಿ ಕೇಂದ್ರಗಳು ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಮೆಟ್ಟಿಲು.ಇಲ್ಲಿ ಮಕ್ಕಳಿಗೆ ನೀಡುವ ಸಂಸ್ಕಾರ ಮತ್ತು ಪ್ರೀತಿ ಅವರ ಭವಿಷ್ಯದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ.ಆದ್ದರಿಂದಕಾರ್ಯಕರ್ತೆಯರು ತಾಯಿಯ ಮಮತೆಯಿಂದ ಮಕ್ಕಳನ್ನು ಸಲಹಬೇಕು, ಎಂದು ಹೇಳಿದರು.
ಗ್ರಾಮೀಣ ಭಾಗದ ಮಕ್ಕಳ ಪೌಷ್ಟಿಕಾಂಶ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ, ಎಂದು ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ನಿಮ್ಮ ಜವಾಬ್ದಾರಿ ದೊಡ್ಡದು. ಅಪೌಷ್ಟಿಕತೆ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ, ಎಂದು ಕರೆ ನೀಡಿದರು. ಗ್ರಾಮ ಮಟ್ಟದಲ್ಲಿ ಇಲಾಖೆಯ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಮಾದರಿ ಸೇವೆಯನ್ನು ಸಲ್ಲಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆರಿಗೆ ಕಿವಿಮಾತು ಎಂದರು.ಈ ಸಂದರ್ಭದಲ್ಲಿ ಸಿಡಿಪಿಓ ಅಮೃತ ಸಾಣಿಕೊಪ್ಪ, ಹಾಗೂ ನೂತನವಾಗಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 