ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya inaugurates dialysis center
ಯರಗಟ್ಟಿ, 01 : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳವಾರ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ಈ ಭಾಗದ ಬಡಜನರಿಗೆ ಅನುಕೂಲವಾಗಲೆಂದು ಡಯಾಲಿಸಿಸ್ ಕೇಂದ್ರವನ್ನು ಸರ್ಕಾರ ಮಂಜೂರು ಮಾಡಿದೆ. ಈ ಭಾಗದ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು' ಎಂದು ಹೇಳಿದರು.
'ಜನಸಂಖ್ಯೆಗೆ ಅನುಸಾರವಾಗಿ ಯರಗಟ್ಟಿಯ 30 ಹಾಸಿಗೆಯಿಂದ 100 ಹಾಸಿಗೆಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಪ್ರಯತ್ನ ಮಾಡುವೆ' ಎಂದು ಹೇಳಿದರು.
ಸವದತ್ತಿ ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀಪಾದ ಸಬೀನೀಸ್ ಮಾತನಾಡಿ, 'ಡಯಾಲಿಸಿಸ್ ಇದು ಕೃತಕ ಮೂತ್ರ ಪಿಂಡದಂತೆ ಕಾರ್ಯನಿರ್ವಹಿಸುತ್ತದೆ. ಮೂತ್ರ ಪಿಂಡದ ವೈಫಲ್ಯವು ಶುಗರ್, ಬಿಪಿ ಇದ್ದವರಿಗೆ ಹೆಚ್ಚಾಗಿ ಕಂಡು ಬರುತ್ತದೆ. ವೈದ್ಯರ ಸಲಹೆ ಇಲ್ಲದೇ ಓಷಧ ಸೇವನೆ, ಚಟಗಳಿಂದ ಮೂತ್ರ ಪಿಂಡದ ಮೇಲೆ ಪರಿಣಾಮವಾಗಿ ಮೂತ್ರ ಪಿಂಡದ ಕಾರ್ಯ ಸ್ಥಗಿತಗೊಂಡಾಗ ಡಯಾಲಿಸಿಸ್ ಮಾಡಲಾಗುತ್ತದೆ' ಎಂದು ಹೇಳಿದರು
ಈವೇಳೆ ಡಾ.ಆರ್.ಬಿ. ಯರಝರ್ವಿ, ಡಾ.ಭುವನೇಶ್ವರಿ ಬಳ್ಳೂರ, ಕ್ಷೇತ್ರ ಆರೋಗ್ಯ ಅಧಿಕಾರಿ ಐ.ಆರ್. ಗಂಜಿ, ನೀಖಿಲ ಪಾಟೀಲ, ಮಂಜು ತಡಸಲೂರ, ಕೆ.ಎಂ.ಎಫ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಉಮೇಶ ಮಾಗುಂಡನ್ನವರ, ಬನಪ್ಪಗೌಡ ಪಾಟೀಲ, ಮಹಾಂತೇಶ ಉಪ್ಪಿನ, ಪ್ರಕಾಶ ವಾಲಿ, ಮಹಾಂತೇಶಹಿರೇಮಠ, ಮಹಾಂತೇಶ ಕತ್ತಿ, ಸುನಿಲ ಕಾಶನ್ನವರ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 