ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya inaugurates dialysis center
ಯರಗಟ್ಟಿ, 01 : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳವಾರ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ಈ ಭಾಗದ ಬಡಜನರಿಗೆ ಅನುಕೂಲವಾಗಲೆಂದು ಡಯಾಲಿಸಿಸ್ ಕೇಂದ್ರವನ್ನು ಸರ್ಕಾರ ಮಂಜೂರು ಮಾಡಿದೆ. ಈ ಭಾಗದ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು' ಎಂದು ಹೇಳಿದರು.
'ಜನಸಂಖ್ಯೆಗೆ ಅನುಸಾರವಾಗಿ ಯರಗಟ್ಟಿಯ 30 ಹಾಸಿಗೆಯಿಂದ 100 ಹಾಸಿಗೆಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಪ್ರಯತ್ನ ಮಾಡುವೆ' ಎಂದು ಹೇಳಿದರು.
ಸವದತ್ತಿ ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀಪಾದ ಸಬೀನೀಸ್ ಮಾತನಾಡಿ, 'ಡಯಾಲಿಸಿಸ್ ಇದು ಕೃತಕ ಮೂತ್ರ ಪಿಂಡದಂತೆ ಕಾರ್ಯನಿರ್ವಹಿಸುತ್ತದೆ. ಮೂತ್ರ ಪಿಂಡದ ವೈಫಲ್ಯವು ಶುಗರ್, ಬಿಪಿ ಇದ್ದವರಿಗೆ ಹೆಚ್ಚಾಗಿ ಕಂಡು ಬರುತ್ತದೆ. ವೈದ್ಯರ ಸಲಹೆ ಇಲ್ಲದೇ ಓಷಧ ಸೇವನೆ, ಚಟಗಳಿಂದ ಮೂತ್ರ ಪಿಂಡದ ಮೇಲೆ ಪರಿಣಾಮವಾಗಿ ಮೂತ್ರ ಪಿಂಡದ ಕಾರ್ಯ ಸ್ಥಗಿತಗೊಂಡಾಗ ಡಯಾಲಿಸಿಸ್ ಮಾಡಲಾಗುತ್ತದೆ' ಎಂದು ಹೇಳಿದರು
ಈವೇಳೆ ಡಾ.ಆರ್.ಬಿ. ಯರಝರ್ವಿ, ಡಾ.ಭುವನೇಶ್ವರಿ ಬಳ್ಳೂರ, ಕ್ಷೇತ್ರ ಆರೋಗ್ಯ ಅಧಿಕಾರಿ ಐ.ಆರ್. ಗಂಜಿ, ನೀಖಿಲ ಪಾಟೀಲ, ಮಂಜು ತಡಸಲೂರ, ಕೆ.ಎಂ.ಎಫ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಉಮೇಶ ಮಾಗುಂಡನ್ನವರ, ಬನಪ್ಪಗೌಡ ಪಾಟೀಲ, ಮಹಾಂತೇಶ ಉಪ್ಪಿನ, ಪ್ರಕಾಶ ವಾಲಿ, ಮಹಾಂತೇಶಹಿರೇಮಠ, ಮಹಾಂತೇಶ ಕತ್ತಿ, ಸುನಿಲ ಕಾಶನ್ನವರ ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 