ವಿವಿಧಅಭಿವೃದ್ಧಿ ಕಾಮಗಾರಿಗಳಿ ಶಾಸಕ ವಿಶ್ವಾಸ ವೈದ್ಯ ಚಾಲನೆ
MLA Vishwas Vaidya inaugurates various development works
ಯರಗಟ್ಟಿ, 19 : ?ಸಮೀಪದ ಬೂದಿಗೊಪ್ಪ ಗ್ರಾಮದಲ್ಲಿ ಸುಸಜ್ಜಿತ ರಸ್ತೆ ಮತ್ತು ಮೂಲಸೌಕರ್ಯಗಳನ್ನು ಹೊಂದಿರಬೇಕೆಂಬ ಸಂಕಲ್ಪದೊಂದಿಗೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.
?ಬೂದಿಗೊಪ್ಪ ಗ್ರಾಮದಿಂದ ಬೆಳಗಾವಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಕೂಡುವ ಸಿ.ಸಿ ರಸ್ತೆ ನಿರ್ಮಾಣಕ್ಕೆ ಅಂದಾಜು 1.20 ಕೋಟಿ ಕಾಮಗಾರಿಗಳು 2024-25ನೇ ಸಾಲಿನ ಮಳೆ ಪರಿಹಾರ ಕಾರ್ಯಕ್ರಮದಡಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಅನುಷ್ಠಾನಗೊಳ್ಳುತ್ತಿವೆ ಎಂದು ಹೇಳಿದರು.ನಿಗದಿತ ಸಮಯದೊಳಗೆ ಅತ್ಯುತ್ತಮ ಗುಣಮಟ್ಟದೊಂದಿಗೆ ಕೆಲಸ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
?ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವುದು ಮತ್ತು ಗ್ರಾಮಗಳ ಸವಾಂರ್ಗೀಣ ವಿಕಾಸಕ್ಕೆ ಶ್ರಮಿಸುವುದು ನಮ್ಮ ನಿರಂತರ ಉದ್ದೇಶವಾಗಿದೆ ಎಂದರು.ಈ ಸಂದರ್ಭದಲ್ಲಿ ವಿಠ್ಠಲ ಆಲದಕಟ್ಟಿ, ಮಹಾಂತೇಶ ಅಂಚಿ, ಮಾರುತಿ ಮುಸನ್ನವರ, ಹನಮಂತ ಆಲದಕಟ್ಟಿ, ಯಲ್ಲಪ್ಪ ಬೆಳವಡಿ, ಸಿದ್ದಪ್ಪ ಕುರಿ, ಮಹಾದೇವ ಆಲದಕಟ್ಟಿ, ಸಣ್ಣಪ್ಪ ಲಚಮಕ್ಕನವರ, ರಾಮಕೃಷ್ಣ ತೇನಗಿ, ಸಂತೋಷ ಮುಸ್ಸನ್ನವರ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ನಿಖಿಲ ಪಾಟೀಲ, ಸವದತ್ತಿ ಎಪಿಎಂಸಿ ಚಂದ್ರು ಜಂಬ್ರಿ, ಮುನವಳ್ಳಿ ಪುರಸಭೆ ಅಧ್ಯಕ್ಷ ಸಿ. ಬಿ. ಬಾಳಿ, ಮಲಿಕಸಾಬ ಬಾಗವಾನ ಗ್ರಾಮದ ಹಿರಿಯರು, ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 