ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya visits Tirumala Venkateswara Swamy Temple
ಸವದತ್ತಿ 10: ಶಾಸಕ ವಿಶ್ವಾಸ ವೈದ್ಯ ಅವರು ಇತ್ತೀಚೆಗೆ ಪವಿತ್ರ ಯಾತ್ರಾಸ್ಥಳ ತಿರುಮಲಕ್ಕೆ ಭೇಟಿ ನೀಡಿ, ಕಲಿಯುಗದ ಪ್ರತ್ಯಕ್ಷ ದೈವ ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕ ತಿರುಪತಿ ತಿಮ್ಮಪ್ಪನ ಭವ್ಯ ದರ್ಶನ ಪಡೆದರು. ವೆಂಕಟೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಅವರು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಬಳಿಕ ಮಾತನಾಡಿದ ಅವರು ವೆಂಕಟೇಶ್ವರ ಮಹಾಸ್ವಾಮಿಯ ಚರಣಾರವಿಂದಗಳಲ್ಲಿ ನನ್ನ ಸವದತ್ತಿ ಕ್ಷೇತ್ರದ ಸಮಸ್ತ ಜನತೆಗೆ ಆಯುಷ್ಯ, ಆರೋಗ್ಯ, ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದೇನೆ. ಜನರ ಆಶೀರ್ವಾದದಿಂದ ದೊರೆತ ಈ ಅವಕಾಶದಲ್ಲಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಲು ಭಗವಂತನ ಕೃಪೆ ಸದಾ ಇರಲಿ ಎಂದು ಕೋರಿದ್ದೇನೆ ಎಂದು ತಿಳಿಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 