ಕರ ಏರಿಕೆ, ಅಕ್ಕಿ ಇಳಿಕೆಗೆ ಶಾಸಕರ ಅಸಮಾಧಾನ
ಬೆಂಗಳೂರು 10: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ಗೆ ಮಂಗಳವಾರ ವಿಧಾನಸಭೆಯ ಅಧಿವೇಶನದಲ್ಲಿ ಸಮ್ಮಿಶ್ರ ಸಕರ್ಾರದ ಆಡಳಿತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿ ಪುನರ್ ಪರಿಶೀಲನೆ ನಡೆಸಲು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ಅವರು ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಣ್ಣ ಅವರ ಯೋಜನೆಗಳನ್ನು ಮುಂದುವರಿಸಿದ್ದಕ್ಕೆ ಅಭಿನಂದನೆಗಳು. ಆದರೆ ಬಡವರ ಪಾಲಿನ ಅನ್ನಭಾಗ್ಯದ ಆಕ್ಕಿಯನ್ನು 2 ಕೆಜಿ ಇಳಿಸಬಾರದಿತ್ತು. 2 ಕೆಜಿ ಕೊಡುವುದರಿಂದ ಸಕರ್ಾರಕ್ಕೆ ಹೆಚ್ಚು ಹೊರೆಯೇನು ಆಗುವುದಿಲ್ಲ. ಬೇಕಾದರೆ ನಿಮ್ಮ ಪಾಲಿನ ಇನ್ನೂ ಒಂದು ಕೆಜಿ ಹೆಚ್ಚಿಗೆ ಕೊಡಿ. ಇದು ನನ್ನ ಸವಿನಯ, ವಿನಮ್ರ ವಿನಂತಿ ಎಂದರು.
ಜೆಡಿಎಸ್ ಶಾಸಕ ವಿಶ್ವನಾಥ್ ಅವರು ಮಾತನಾಡಿ ಬಜೆಟ್ನಲ್ಲಿ ಸಾಲ ಮನ್ನಾ, ತ್ರಿವಿಧ ದಾಸೋಹಿ ಧರ್ಮಪೀಠಗಳಿಗೆ 25 ಕೋಟಿ ರೂಪಾಯಿ ಅನುದಾನ ಸೇರಿದಂತೆ ಹಲವು ಸಿಹಿ ನೀಡಿದ್ದಾರೆ, ಆದರೆ ತೈಲ ಕರ ಭಾರ ಸಾಮನ್ಯ ಜನರಿಗೆ ಹೊರೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಪುನರ್ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 