MLC ಸಿ.ಟಿ. ರವಿ ಬಂಧನ ಪ್ರಕರಣ: ಸಿಪಿಐ ಮಂಜುನಾಥ ನಾಯಕ ಅಮಾನತು
MLC C.T. Ravi arrest case: CPI Manjunath Nayak suspended
ಬೆಳಗಾವಿ 25: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆತಂದ ಕರ್ತವ್ಯ ಲೋಪ, ಬೇಜಬ್ದಾರಿತನ ಪ್ರದರ್ಶನ ಆರೋಪ ಹಾಗೂ ಅಪಾಧಿತರನ್ನು ಹೊರತುಪಡಿಸಿ ಠಾಣೆಯೊಳಗೆ ಯಾರನ್ನೂ ಬಿಡದಂತೆ ಆದೇಶ ನೀಡಿದ್ದರೂ ನಿರ್ಲಕ್ಷ್ಯ ವಹಿಸಿ ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿರುವ ಆರೋಪದ ಮೇಲೆ ಖಾನಾಪುರ ಸಿಪಿಐ ಮಂಜುನಾಥ ನಾಯಕ ಅವರನ್ನುಅಮಾನತು ಮಾಡಿ ಐಜಿಪಿ ವಿಕಾಸಕುಮಾರ ವಿಕಾಸ ಆದೇಶ ಹೊರಡಿಸಿದ್ದಾರೆ.
ರವಿ ಅವರನ್ನು ಬಂಧಿಸಿ ತಡರಾತ್ರಿ ಖಾನಾಪುರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಠಾಣೆಯ ಹೊರಗಡೆ ಗಲಾಟೆ ಮಾಡಿದ ಬಿಜೆಪಿ ನಾಯಕರನ್ನು ಸಿಪಿಐ ಮಂಜುನಾಥ ಠಾಣೆಯೊಳಗೆ ಬಿಟ್ಟಿದ್ದರು.
ಇದಾದಬಳಿಕ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ ಜಗದೀಶ ಅವರೂ ಅರ್ಧಗಂಟೆ ಚರ್ಚೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗರಂ ಆಗಿರುವ ಗೃಹಸಚಿವ ಪರಮೇಶ್ವರ ಅವರು ಪೊಲೀಸರಿಗೆ ತರಾಟೆಗೆಕೊಂಡಿದ್ದಾರೆ. ಐಜಿಪಿ ವಿಕಾಸಕುಮಾರ ಅವರು ಸಿಪಿಐ ಮಂಜುನಾಥ ನಾಯಕ ಅವರನ್ನುಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 