MLC ಸಿ.ಟಿ. ರವಿ ಬಂಧನ ಪ್ರಕರಣ: ಸಿಪಿಐ ಮಂಜುನಾಥ ನಾಯಕ ಅಮಾನತು
MLC C.T. Ravi arrest case: CPI Manjunath Nayak suspended
ಬೆಳಗಾವಿ 25: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆತಂದ ಕರ್ತವ್ಯ ಲೋಪ, ಬೇಜಬ್ದಾರಿತನ ಪ್ರದರ್ಶನ ಆರೋಪ ಹಾಗೂ ಅಪಾಧಿತರನ್ನು ಹೊರತುಪಡಿಸಿ ಠಾಣೆಯೊಳಗೆ ಯಾರನ್ನೂ ಬಿಡದಂತೆ ಆದೇಶ ನೀಡಿದ್ದರೂ ನಿರ್ಲಕ್ಷ್ಯ ವಹಿಸಿ ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿರುವ ಆರೋಪದ ಮೇಲೆ ಖಾನಾಪುರ ಸಿಪಿಐ ಮಂಜುನಾಥ ನಾಯಕ ಅವರನ್ನುಅಮಾನತು ಮಾಡಿ ಐಜಿಪಿ ವಿಕಾಸಕುಮಾರ ವಿಕಾಸ ಆದೇಶ ಹೊರಡಿಸಿದ್ದಾರೆ.
ರವಿ ಅವರನ್ನು ಬಂಧಿಸಿ ತಡರಾತ್ರಿ ಖಾನಾಪುರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಠಾಣೆಯ ಹೊರಗಡೆ ಗಲಾಟೆ ಮಾಡಿದ ಬಿಜೆಪಿ ನಾಯಕರನ್ನು ಸಿಪಿಐ ಮಂಜುನಾಥ ಠಾಣೆಯೊಳಗೆ ಬಿಟ್ಟಿದ್ದರು.
ಇದಾದಬಳಿಕ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ ಜಗದೀಶ ಅವರೂ ಅರ್ಧಗಂಟೆ ಚರ್ಚೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗರಂ ಆಗಿರುವ ಗೃಹಸಚಿವ ಪರಮೇಶ್ವರ ಅವರು ಪೊಲೀಸರಿಗೆ ತರಾಟೆಗೆಕೊಂಡಿದ್ದಾರೆ. ಐಜಿಪಿ ವಿಕಾಸಕುಮಾರ ಅವರು ಸಿಪಿಐ ಮಂಜುನಾಥ ನಾಯಕ ಅವರನ್ನುಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 