ವ್ಯಾಪಿಸುತ್ತಿರುವ ಕೊರೊನಾ ಸೋಂಕು : ಪ್ರಧಾನಿ ಮೋದಿ ಬ್ರುಸೆಲ್ಸ್ ಪ್ರವಾಸ ರದ್ದು
ನವದೆಹಲಿ, ಮಾ 7, ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ್ದು ಈ ಸೋಂಕಿಗೆ ಹಲವರು ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಬ್ರುಸೆಲ್ಸ್ ಪ್ರವಾಸ ರದ್ದು ಮಾಡಿದ್ದಾರೆ. ಅಲ್ಲದೇ ಭಾರತ- ಐರೋಪ್ಯ ಒಕ್ಕೂಟ ಶೃಂಗ ಸಭೆಯನ್ನೂ ಮುಂದೂಡಲಾಗುವುದು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಗುರುಗ್ರಾಮದಲ್ಲಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಅವರೊಂದಿಗೆ ಸಂಪರ್ಕದಲ್ಲಿದ್ದ ಐವರನ್ನು ದೆಹಲಿಯಲ್ಲಿ ತೀವ್ರ ನಿಗಾದಲ್ಲಿ ಇಡಲಾಗಿದೆ. ಸೋಂಕಿತ ವ್ಯಕ್ತಿ ಒಟ್ಟು 91 ಮಂದಿಯೊಂದಿಗೆ ಸಂಪರ್ಕದಲ್ಲಿದ್ದ ಎಂಬ ಮಾಹಿತಿಯೂ ಹೊರಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಟಲಿ ಮತ್ತು ದಕ್ಷಿಣ ಕೊರಿಯಾದಿಂದ ಬರುವ ಎಲ್ಲ ಪ್ರಯಾಣಿಕರಿಗೂ ಕೇಂದ್ರ ಸರಕಾರ ಹೆಚ್ಚುವರಿ ವೀಸಾ ನಿರ್ಬಂಧ ವಿಧಿಸಿದೆ. ಆಯಾ ದೇಶಗಳ ಆರೋಗ್ಯ ಪ್ರಾಧಿಕಾರದಡಿ ಬರುವ ಪ್ರಯೋಗಾಲಯಗಳಿಂದ ತಮಗೆ ಕೋವಿಡ್-19 ಸೋಂಕು ಇಲ್ಲ ಎಂದು ದೃಢಪಡಿಸಿದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತೋರಿಸಿ ಭಾರತ ಪ್ರವೇಶಕ್ಕೆ ಅನುಮತಿ ಪಡೆಯಬಹುದಾಗಿ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 