ವ್ಯಾಪಿಸುತ್ತಿರುವ ಕೊರೊನಾ ಸೋಂಕು : ಪ್ರಧಾನಿ ಮೋದಿ ಬ್ರುಸೆಲ್ಸ್ ಪ್ರವಾಸ ರದ್ದು
ನವದೆಹಲಿ, ಮಾ 7, ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ್ದು ಈ ಸೋಂಕಿಗೆ ಹಲವರು ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಬ್ರುಸೆಲ್ಸ್ ಪ್ರವಾಸ ರದ್ದು ಮಾಡಿದ್ದಾರೆ. ಅಲ್ಲದೇ ಭಾರತ- ಐರೋಪ್ಯ ಒಕ್ಕೂಟ ಶೃಂಗ ಸಭೆಯನ್ನೂ ಮುಂದೂಡಲಾಗುವುದು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಗುರುಗ್ರಾಮದಲ್ಲಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಅವರೊಂದಿಗೆ ಸಂಪರ್ಕದಲ್ಲಿದ್ದ ಐವರನ್ನು ದೆಹಲಿಯಲ್ಲಿ ತೀವ್ರ ನಿಗಾದಲ್ಲಿ ಇಡಲಾಗಿದೆ. ಸೋಂಕಿತ ವ್ಯಕ್ತಿ ಒಟ್ಟು 91 ಮಂದಿಯೊಂದಿಗೆ ಸಂಪರ್ಕದಲ್ಲಿದ್ದ ಎಂಬ ಮಾಹಿತಿಯೂ ಹೊರಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಟಲಿ ಮತ್ತು ದಕ್ಷಿಣ ಕೊರಿಯಾದಿಂದ ಬರುವ ಎಲ್ಲ ಪ್ರಯಾಣಿಕರಿಗೂ ಕೇಂದ್ರ ಸರಕಾರ ಹೆಚ್ಚುವರಿ ವೀಸಾ ನಿರ್ಬಂಧ ವಿಧಿಸಿದೆ. ಆಯಾ ದೇಶಗಳ ಆರೋಗ್ಯ ಪ್ರಾಧಿಕಾರದಡಿ ಬರುವ ಪ್ರಯೋಗಾಲಯಗಳಿಂದ ತಮಗೆ ಕೋವಿಡ್-19 ಸೋಂಕು ಇಲ್ಲ ಎಂದು ದೃಢಪಡಿಸಿದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತೋರಿಸಿ ಭಾರತ ಪ್ರವೇಶಕ್ಕೆ ಅನುಮತಿ ಪಡೆಯಬಹುದಾಗಿ ಎಂದು ಮೂಲಗಳು ತಿಳಿಸಿವೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 