ರೈತರಿಗೆ ರಸಗೊಬ್ಬರ ಕೊರತೆಯ ಸಮಸ್ಯೆ ಪರಿಹರಿಸಲು ಸಂಸದ ಈ.ತುಕಾರಾಮ್ ಪ್ರಯತ್ನ
MP E. Tukaram's efforts to solve the problem of fertilizer shortage for farmers
ಬಳ್ಳಾರಿ 24 :ಜಿಲ್ಲೆಯ ರೈತರಿಗೆ ಮುಂಗಾರು ಬಿತ್ತನೆಯ ಬೇಡಿಕೆಗೆ ತಕ್ಕಂತೆ ಯೂರಿಯಾ ಮತ್ತು ಇತರೆ ರಸಗೊಬ್ಬರ ಪೂರೈಕೆಯಾಗದೇ ಕೃಷಿ ಚಟುವಟಿಕೆಗಳಿಗೆ ತುಂಬಾ ಅನಾನುಕೂಲ ಆಗುತ್ತಿರುವ ಬಗ್ಗೆ ಅಖಂಡ ಬಳ್ಳಾರಿ ಜಿಲ್ಲೆಯ ಸಂಸದರಾದ ಈ.ತುಕಾರಾಮ್ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಬಳ್ಳಾರಿ ಜಿಲ್ಲೆಯ ರೈತ ಸಮುದಾಯಕ್ಕೆ ಯೂರಿಯಾ ಮತ್ತು ಇತರೆ ರಸಗೊಬ್ಬರಗಳನ್ನು ಟ್ರ್ಯಾಕ್ ಸಂಖ್ಯೆ:08 ರಲ್ಲಿ ಮಾತ್ರ ಇಳಿಸಲಾಗುತ್ತಿರುವುದರಿಂದ ರೈತರಿಗೆ ಯಾವುದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಮನವರಿಕೆ ಮಾಡಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಕೋರಿದರು.
ಇದಕ್ಕೆ ಸಚಿವ ವಿ.ಸೋಮಣ್ಣ ಅವರು ಸಂಸದ ಈ.ತುಕಾರಾಮ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೂಡಲೇ ಬಳ್ಳಾರಿ ರೈಲ್ವೇ ನಿಲ್ದಾಣದ (ಜಂಕ್ಷನ್) ಟ್ರ್ಯಾಕ್ ಸಂಖ್ಯೆ: 06 ಮತ್ತು 08 ರಲ್ಲಿ ರಸಗೊಬ್ಬರಗಳನ್ನು ಇಳಿಸುವುದಕ್ಕೆ (ಅನ್ಲೋಡಿಂಗ್) ಅನುಮತಿ ನೀಡಿ ಬಳ್ಳಾರಿ ಜಿಲ್ಲೆಯ ಎಲ್ಲಾ ರೈತರಿಗೆ ಬೇಡಿಕೆ ಇರುವ ರಸಗೊಬ್ಬರ ಪೂರೈಕೆಗೆ ಸಮಸ್ಯೆಯಾಗದಂತೆ ಪರಿಹರಿಸುವುದಾಗಿ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 