ಸಂಸದ ಪಿ ಸಿ ಗದ್ದಿಗೌಡರ ಶಾಸಕ ಸಿದ್ದು ಸವದಿಯಿಂದ ಮನ್ ಕಿ ಬಾತ್ ವೀಕ್ಷಣೆ
MP P.C. Gaddigowdar's MLA Sidhu Savadi watches Mann Ki Baat
ಮಹಾಲಿಂಗಪುರ 31: ನಗರದ ಬಿಜೆಪಿ ಮುಖಂಡ ಶಿವಾನಂದ ಅಂಗಡಿ,ಅವರ ಕಾರ್ಯಾಲಯದಲ್ಲಿ ಅ.31ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಸಂಸದ ಪಿ ಸಿ ಗದ್ದಿಗೌಡ,ಶಾಸಕ ಸಿದ್ದು ಸವದಿಯವರು ಭಾನುವಾರ ವೀಕ್ಷಿಸಿದರು.
ಬಳಿಕ ಮಾತನಾಡಿದ ಅವರು, ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಭಾರತ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸಬೇಕೆಂಬ ಸದಾಶಯದೊಂದಿಗೆ ಕೆಲಸ ಮಾಡುತ್ತಿದ್ದು,ದೇಶದ ನಾಗರಿಕರೊಂದಿಗೆ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಪ್ರತಿ ತಿಂಗಳು ‘ಮನ್ ಕಿ ಬಾತ್’ ವಿಶೇಷ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ.ಕಾರ್ಯಕ್ರಮ ಯಶಸ್ವಿಯಾಗಿ 125 ಸಂಚಿಕೆ ಪೂರೈಸಿದೆ ಎಂದು ಸಂಸದ ಪಿ ಸಿ ಗದ್ದಿಗೌಡರ ಹೇಳಿದರು.
ನಂತರ ಶಾಸಕ ಸಿದ್ದು ಸವದಿ ಮಾತನಾಡಿ ಪ್ರತಿ ತಿಂಗಳು ಹೊಸ ವಿಚಾರಗಳ ಬಗ್ಗೆ ಪ್ರಸ್ತಾಪಿಸುವ ಪ್ರಧಾನಿಯವರು ಸಕಾರಾತ್ಮಕ ವಿಷಯಗಳಿಗೆ ಹೆಚ್ಚಿನ ಮಹತ್ವ ಕೊಡುವುದರಿಂದ ಜನತೆಗೆ ಕಾರ್ಯಕ್ರಮ ಬಹಳಷ್ಟು ಇಷ್ಟವಾಗಿದೆ.ರೇಡಿಯೋ,ದೂರದರ್ಶನ ಮತ್ತು ಯುಟ್ಯೂಬ್ ಮೂಲಕ ಕೋಟ್ಯಾಂತರ ಜನ ವೀಕ್ಷಿಸುತ್ತಿದ್ದಾರೆ.ದಿನೇ ದಿನೇ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದೆ ಮತ್ತು ದೊಡ್ಡ ಸಂಖ್ಯೆಯಲ್ಲಿ ಯುವಜನತೆ ಪ್ರಧಾನಿ ಮೋದಿ ಅವರೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಕಾರ್ಯಕ್ರಮ ಎಲ್ಲರಿಗೂ ಇಷ್ಟವಾಗುತ್ತಿದೆ. ಆದ್ದರಿಂದಲೇ ‘ಮನ್ ಕೀ ಬಾತ್’ ಕಾರ್ಯಕ್ರಮ ದಿನದಿಂದ ದಿನಕ್ಕೆ ಜನಮನ ಸೆಳೆಯುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪಿಕೆಪಿಎಸ್ ಅಧ್ಯಕ್ಷ ಬಸನಗೌಡ ಪಾಟೀಲ, ಪುರಸಭೆ ಸದಸ್ಯ ಶೇಖರ ಅಂಗಡಿ, ಬಿಜೆಪಿ ಮುಖಂಡರಾದ ಜಿ ಎಸ್ ಗೊಂಬಿ, ಮಹಾಲಿಂಗಪ್ಪ ಕುಳ್ಳೋಳಿ, ಗುರುಪಾದ ಅಂಬಿ, ಹನಮಂತ ಬರುಡ, ಶಂಕರಗೌಡ ಪಾಟೀಲ, ಪುಡಲಿಕ್ ಗಡೆಕರ, ಮಲ್ಲಪ್ಪ ದಲಾಲ, ತಿಪ್ಪಣ್ಣ ಬಂಡಿವಡ್ಡರ, ಚೇತನ ಬಂಡಿವಡ್ಡರ, ಸಿದ್ದಪ್ಪ ಸಗರಿ, ಮಹೇಶ ಜಿಡ್ಡಿಮನಿ, ವಿಜಯಕುಮಾರ ಕುಳಲಿ, ಜಗದೀಶ ಜಕ್ಕನ್ನವರ, ಮಹಾಲಿಂಗಪ್ಪ ಬುದ್ನಿ, ಬಸವರಾಜ ಮಡಿವಾಳ, ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 