ಪ್ರಧಾನಿ ಮೋದಿ ಸರ್ಕಾರವನ್ನು ಅಭಿನಂದಿಸಿದ ಸಂಸದ ರಮೇಶ ಜಿಗಜಿಣಗಿ
MP Ramesh Jigajinagi congratulates Prime Minister Modi's government
ಪ್ರಧಾನಿ ಮೋದಿ ಸರ್ಕಾರವನ್ನು ಅಭಿನಂದಿಸಿದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ 04: ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜಾಗತಿಕ ಸವಾಲುಗಳನ್ನು ಮೆಟ್ಟಿ ನಿಂತು ದೇಶವನ್ನು ಅಭಿವೃದ್ಧಿಯ ಮುಂಚೂಣಿಗೆ ಕೊಂಡೊಯ್ದಿದೆ, ಇದರ ಜೊತೆ ಜೊತೆಗೇ ಸಾಮಾಜದ ಕಟ್ಟಕಡೆಯ ಜನರೂ ಆರ್ಥಿಕ ಚೈತನ್ಯ ಹೊಂದಲು ಹತ್ತು- ಹಲವು ಯೋಜನೆಗಳನ್ನು ರೂಪಿಸಿದೆ ಓಂ ಮೂಲಕ ಸ್ವಾವಲಂಬಿ ಭಾರತದ ಸಂಕಲ್ಪ, ವಿಕಸಿತ ಭಾರತದ ಯೋಜನೆಗಳು ಸಾಕಾರಗೊಳ್ಳಲು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಜನಸಾಮಾನ್ಯರಿಗೆ ’ತೆರಿಗೆ ಹೊರೆ ಹೆಚ್ಚಿಸುವುದು ಆದ್ಯತೆಯಲ್ಲ, ಇಳಿಸುವುದು ನಮ್ಮ ಕಾಳಜಿ’ ಎಂದು ಪರಿಭಾವಿಸಿ ನೂತನ ಉಖಖಿ ದರ ಜಾರಿಗೆ ತರುವ ಮೂಲಕ ದಸರಾ ಹಾಗೂ ದೀಪಾವಳಿ ಉಡುಗೊರೆ ನೀಡಿರುವ ಹೆಮ್ಮೆಯ ಪ್ರಧಾನಿ ಮೋದಿ ಜೀ ಅವರ ನೇತೃತ್ವದ ಸರ್ಕಾರವನ್ನು ನಾಡಿನ ಜನಸಾಮಾನ್ಯರ ಪರವಾಗಿ ಅಭಿನಂದಿಸುವೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.
ದೇಶದ ರೈತರು, ಸಣ್ಣ ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು ಈ ಸುಧಾರಣೆಗಳಿಂದ ಪ್ರಯೋಜನ ಪಡೆಯುವುದರ ಜೊತೆಗೆ ಸಣ್ಣ ವ್ಯಾಪಾರಿಗಳು, ಮತ್ತು ಉದ್ಯಮಿಗಳು ವ್ಯಾಪಾರ ಮಾಡುವುದು ಸುಲಭವಾಗುವ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸುತ್ತದೆ. ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸುವುದು ಮತ್ತು ಸಣ್ಣ ವ್ಯವಹಾರಗಳಿಗೆ ವ್ಯಾಪಾರ ವಾತಾವರಣವನ್ನು ಸುಧಾರಿಸುವುದು ಈ ಸುಧಾರಣೆಗಳ ಉದ್ದೇಶವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 