ಪ್ರಧಾನಿ ಮೋದಿ ಸರ್ಕಾರವನ್ನು ಅಭಿನಂದಿಸಿದ ಸಂಸದ ರಮೇಶ ಜಿಗಜಿಣಗಿ
MP Ramesh Jigajinagi congratulates Prime Minister Modi's government
ಪ್ರಧಾನಿ ಮೋದಿ ಸರ್ಕಾರವನ್ನು ಅಭಿನಂದಿಸಿದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ 04: ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜಾಗತಿಕ ಸವಾಲುಗಳನ್ನು ಮೆಟ್ಟಿ ನಿಂತು ದೇಶವನ್ನು ಅಭಿವೃದ್ಧಿಯ ಮುಂಚೂಣಿಗೆ ಕೊಂಡೊಯ್ದಿದೆ, ಇದರ ಜೊತೆ ಜೊತೆಗೇ ಸಾಮಾಜದ ಕಟ್ಟಕಡೆಯ ಜನರೂ ಆರ್ಥಿಕ ಚೈತನ್ಯ ಹೊಂದಲು ಹತ್ತು- ಹಲವು ಯೋಜನೆಗಳನ್ನು ರೂಪಿಸಿದೆ ಓಂ ಮೂಲಕ ಸ್ವಾವಲಂಬಿ ಭಾರತದ ಸಂಕಲ್ಪ, ವಿಕಸಿತ ಭಾರತದ ಯೋಜನೆಗಳು ಸಾಕಾರಗೊಳ್ಳಲು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಜನಸಾಮಾನ್ಯರಿಗೆ ’ತೆರಿಗೆ ಹೊರೆ ಹೆಚ್ಚಿಸುವುದು ಆದ್ಯತೆಯಲ್ಲ, ಇಳಿಸುವುದು ನಮ್ಮ ಕಾಳಜಿ’ ಎಂದು ಪರಿಭಾವಿಸಿ ನೂತನ ಉಖಖಿ ದರ ಜಾರಿಗೆ ತರುವ ಮೂಲಕ ದಸರಾ ಹಾಗೂ ದೀಪಾವಳಿ ಉಡುಗೊರೆ ನೀಡಿರುವ ಹೆಮ್ಮೆಯ ಪ್ರಧಾನಿ ಮೋದಿ ಜೀ ಅವರ ನೇತೃತ್ವದ ಸರ್ಕಾರವನ್ನು ನಾಡಿನ ಜನಸಾಮಾನ್ಯರ ಪರವಾಗಿ ಅಭಿನಂದಿಸುವೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.
ದೇಶದ ರೈತರು, ಸಣ್ಣ ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು ಈ ಸುಧಾರಣೆಗಳಿಂದ ಪ್ರಯೋಜನ ಪಡೆಯುವುದರ ಜೊತೆಗೆ ಸಣ್ಣ ವ್ಯಾಪಾರಿಗಳು, ಮತ್ತು ಉದ್ಯಮಿಗಳು ವ್ಯಾಪಾರ ಮಾಡುವುದು ಸುಲಭವಾಗುವ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸುತ್ತದೆ. ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸುವುದು ಮತ್ತು ಸಣ್ಣ ವ್ಯವಹಾರಗಳಿಗೆ ವ್ಯಾಪಾರ ವಾತಾವರಣವನ್ನು ಸುಧಾರಿಸುವುದು ಈ ಸುಧಾರಣೆಗಳ ಉದ್ದೇಶವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 