‘ಹೈನ’ ಟ್ರೇಲರ್ ಬಿಡುಗಡೆ ಮಾಡಿದ ಸಂಸದ ತೇಜಸ್ವಿ ಸೂರ್ಯ
MP Tejaswi Surya released the trailer of 'Haina'
ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ ‘ಹೈನ’ ಚಿತ್ರ ಪೆಟ್ರಿಯಾಟಿಕ್ ಕಥಾಹಂದರ ಹೊಂದಿರುವ ಚಿತ್ರ. ಇದೇ ತಿಂಗಳ 31ರಂದು ತೆರೆಗೆ ಬರಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ‘ಹೈನ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ‘ಸಮಾಜಕ್ಕೆ ಉತ್ತಮ ಸಂದೇಶ ನೀಡಲು ‘ಹೈನ’ ಚಿತ್ರ ಮಾಡಿದ್ದಾರೆ. ಪ್ರಚಲಿತ ವಿಷಯ ಮುಂದಿಟ್ಟುಕೊಂಡು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಕೂಡ ಈ ಚಿತ್ರದ ಮೂಲಕ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇದರಿಂದ ಸಮಾಜದಲ್ಲಿ ಜಾಗೃತಿ ಉಂಟಾಗಲಿ, ವೆಂಕಟ್ ಭಾರಧ್ವಜ್ ಅವರ ಪ್ರಯತ್ನಕ್ಕೆ ಒಳ್ಳೆಯದಾಗಲಿ, ಇನ್ನಷ್ಟು ಸಿನಿಮಾ ಅವರಿಂದ ಬರಲಿ’ ಎಂದು ಶುಭ ಹಾರೈಸಿದ್ದಾರೆ.
ಇದೊಂದು ರಾಷ್ಟ್ರಭಕ್ತಿಯ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತನಾಡಿದ ನಿರ್ದೇಶಕ ವೆಂಕಟ್ ಭಾರದ್ವಾಜ್, ‘ಇಂತಹ ಚಿತ್ರ ನಿರ್ದೇಶನ ಮಾಡಲು ಬಹಳ ಖುಷಿಯಾಗಿದೆ. ಗುಪ್ತಾಚಾರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ರಕ್ಷಣಾ ಇಲಾಖೆಯ ಕಾರ್ಯವೈಖರಿಯ ಬಗ್ಗೆ ನಮ್ಮ ಚಿತ್ರದಲ್ಲಿ ತೋರಿಸಲಾಗಿದೆ. ಇಂತಹ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿಕೊಟ್ಟ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದ. ನಮ್ಮ ಚಿತ್ರದಲ್ಲಿ ಬೇರೆ ಕೆಲವು ದೇಶಗಳ ಹೆಸರನ್ನು ಬಳಸಿದ್ದೆವು. ಆ ಹೆಸರನ್ನು ಬಳಸದಂತೆ ಸೆನ್ಸಾರ್ ಮಂಡಳಿ ಹೇಳಿದೆ. ಅದು ಸ್ವಲ್ಪ ಬೇಸರವಾಗಿದೆ. ಉಳಿದಂತೆ ಚಿತ್ರತಂಡದ ಸಹಕಾರದಿಂದ ‘ಹೈನ’ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿ 31ರಂದು ಬಿಡುಗಡೆಯಾಗುತ್ತಿದೆ’ ಎಂದರು.
‘ಅಕ್ರಮ ವಲಸಿಗರು ದೇಶಕ್ಕೆ ನುಸುಳಿ, ಹೇಗೆ ಉಪಯೋಗಿಸುತ್ತಿದ್ದಾರೆ. ದೇಶದ ಆಂತರಿಕ ಭದ್ರತೆ, ಭಯೋತ್ಪಾದಕರಿಗೆ ಹಣ ಹೇಗೆ ಬರುತ್ತದೆ ಎನ್ನುವುದನ್ನು ಚಿತ್ರದಲ್ಲಿ ತೋರಿಸಲಾಗಿದೆ’ ಎಂದು ಕಥೆ ಬರೆದಿರುವ ಲಕ್ಷ್ಮಣ್ ಶಿವಶಂಕರ್ ಹೇಳಿದರು. ಈ ಸಂದರ್ಭದಲ್ಲಿ ಛಾಯಾಗ್ರಾಹಕ ನಿಶಾಂತ್ ನಾಣಿ, ಸಂಕಲನಕಾರ ಶಮೀಕ್ ಸೇರಿದಂತೆ ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ವೆಂಕಟ್ ಭಾರದ್ವಾಜ್ ಹಾಗೂ ರಾಜ್ ಕಮಲ್ ನಿರ್ಮಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಹರ್ಷ ಅರ್ಜುನ್, ದಿಗಂತ ಸ್ವರೂಪ, ರಾಜ್ ಕಮಲ್, ಲಕ್ಷ್ಮಣ ಶಿವಶಂಕರ್, ನಂದಕಿಶೋರ್ ಮತ್ತು ಲಾರೆನ್ಸ್ ಪ್ರೀತಂ ಅವರಂತಹ ಪ್ರತಿಭಾನ್ವಿತ ನಟರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 