ಎಂ.ಎಸ್ ಧೋನಿ ನನ್ನ ನೆಚ್ಚಿನ ಕ್ರಿಕೆಟಿಗ: ಕೇದಾರ್ ಜಾಧವ್
ಚೆನ್ನೈ, ಏ 17,ಭಾರತ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನನ್ನ ನೆಚ್ಚಿನ ಕ್ರಿಕೆಟಿಗ ಎಂದು ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಕೇದಾರ್ ಜಾಧವ್ ತಿಳಿಸಿದ್ದಾರೆ.ಇನ್ಸ್ಟಾಗ್ರಾಮ್ ಲೈವ್ ಚಾಟ್ನಲ್ಲಿ ಮಾತನಾಡಿರುವ ಕೇದಾರ್ ಜಾಧವ್, ನನ್ನ ಕ್ರಿಕೆಟ್ ವೃತ್ತಿ ಜೀವನದಲ್ಲಿ ಒಂದು ಹಂತಕ್ಕೆ ತಲುಪಲು ಎಂ.ಎಸ್ ಧೋನಿ ನನಗೆ ಸಾಕಷ್ಟು ನೆರವಾಗಿದ್ದಾರೆ. ಹಾಗಾಗಿ , ಅವರು ನನ್ನ ನೆಚ್ಚಿನ ಕ್ರಿಕೆಟಿಗರಾಗಿ ಉಳಿದಿದ್ದಾರೆ ಎಂದು ಹೇಳಿದ್ದಾರೆ. "ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ನೋಡಿಕೊಂಡು ಬೆಳೆದಿದ್ದೇನೆ. ಅವರೊಂದಿಗೆ ಭಾರತದ ಪರ ಒಂದೇ ಒಂದು ಪಂದ್ಯವಾಡಲಿಲ್ಲವೆಂಬ ಬೇಸರ ನನಗಿದೆ. ಆದರೆ, ನಾನು ಎಂ.ಎಸ್.ಧೋನಿಯನ್ನು ಭೇಟಿಯಾದಾಗ ಅವರು ತುಂಬಾ ಕಟ್ಟುನಿಟ್ಟಿನ ವ್ಯಕ್ತಿ ಎಂದು ಭಾವಿಸಿದೆ. ಐಪಿಎಲ್ನಲ್ಲಿ ಅವರ ವಿರುದ್ಧ ಅನೇಕ ಪಂದ್ಯಗಳನ್ನು ಆಡಿದ್ದೇನೆ. ಆದರೆ, ಅವರನ್ನು ಭೇಟಿಯಾದ ನಂತರ, ನನ್ನ ನೆಚ್ಚಿನ ಕ್ರಿಕೆಟಿಗನ ಬಗ್ಗೆ ಯಾರಾದರೂ ಕೇಳಿದಾಗ ನನ್ನ ಮನಸ್ಸಿನಲ್ಲಿ ಧೋನಿ ಬಿಟ್ಟು ಬೇರೆ ಯಾರ ಹೆಸರು ನೆನಪಾಗುವುದಿಲ್ಲ," ಎಂದು ಇನ್ಸ್ಟಾಗ್ರಾಮ್ ಲೈವ್ ಸೆಷನ್ನಲ್ಲಿ ಜಾಧವ್ ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 