ಮಾ. 1ರಂದು ವಧುವರರ ಸಮಾವೇಶ
ಲೋಕದರ್ಶನ ವರದಿ
ಕೊಪ್ಪಳ 25: ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಮಾ. 01ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವೀರಶೈವ ಲಿಂಗಾಯತ ವಧುವರರ ಸಮಾವೇಶ ನಡೆಯಲಿದೆ ಎಂದು ಕನರ್ಾಟಕ ವೀರಶೈವ ವಧು-ವರರ ಆನ್ವೇಷಣಾ ಕೇಂದ್ರದ ಅಧ್ಯಕ್ಷ ಶಿವಕುಮಾರ್ ಹಿರೇಮಠ ಹೇಳಿದರು.
ಅವರು ನಗರದ ಪತ್ರಿಕಾ ಭವನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ರಾಜ್ಯ ಮಟ್ಟದ ವೀರಶೈವ ಲಿಂಗಾಯತ ಹಾಗೂ ಜಂಗಮ ವಧು-ವರರ ಮತ್ತು ಪಾಲಕರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ನಿವೃತ್ತಿ ಅಧಿಕಾರಿ ವೀರೇಶಪ್ಪ ಹಾಳಕೇರಿ. ಕೊಪ್ಪಳ ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಕಳಕನಗೌಡ ಪಾಟೀಲ್ ಆಗಮಿಸಲಿದ್ದಾರೆ. ಸಮಾವೇಶದಲ್ಲಿ ವಧು-ವರರನ್ನು ಪರಸ್ಪರ ಪರಿಚಯ ಮಾಡಿಕೊಡಲಾಗುವುದು. ಆಸಕ್ತ ವಧು-ವರರು ಹಾಗೂ ಪಾಲಕರನ್ನು ಸ್ಥಳದಲ್ಲಿ ಮಾತುಕತೆಗೆ ಅವಕಾಶ ಕಲ್ಪಸಿಕೊಡಲಾಗುವುದು. ಸಮಾವೇಶದಲ್ಲಿ ಭಾಗವಹಿಸಿ ಸದಸ್ಯತ್ವ ಪಡೆದವರಿಗೆ ಮದುವೆ ನಿಶ್ಚಯದ ಮಾಹಿತಿ ಹಾಗೂ ಪರಸ್ಪರ ತೋರಿಸುವ ಸೇವೆ ಮಾಡಲಾಗುವುದು ಎಂದರು.
ವಧು-ವರರು ಒಂದು ಫೋಟೋ ಜಾತಕದೊಂದಿಗೆ ಈ ಸಮಾವೇಶದಲ್ಲಿ ಭಾಗವಹಿಸಿ, ವೀರಶೈವ ಲಿಂಗಾಯತ, ಜಂಗಮ, ಆರಾಧ್ಯರು, ಪಂಚಮಸಾಲಿ, ಬಣಜಿಗ, ಆದಿಬಣಜಿಗ, ಶಿವಾಚಾರ್ಯ ಕುಂಬಾರ, ಸಾದರ, ಲಿಂಗಾಯತ ರೆಡ್ಡಿ, ಹೂಗಾರ, ಸೇರಿದಂತೆ ಎಲ್ಲಾ ಒಳಪಂಗಡಗಳು ಸಕರ್ಾರ, ಅರೆ-ಸಕರ್ಾರಿ ಎಂಜಿನಿಯರ್, ವೈದ್ಯರು, ವ್ಯಾಪಾರಸ್ಥರು, ಉದೋಗಸ್ಥರು ಸೇರಿದಂತೆ ಇತರರು ಭಾಗವಹಿಸುವರು ಇದರ ಸದುಪಯೋಗಪಡಿಸಿಕೊಳ್ಳಲು ಸಮಾಜ ಬಾಂಧವರಲ್ಲಿ ಕೋರಿದರು. ಹೆಚ್ಚಿನ ಮಾಹಿತಿಗಾಗಿ: 9663108606 ಸಂಪಕಿಸಬಹುದಾಗಿದೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 