ಮಾ. 1ರಂದು ವಧುವರರ ಸಮಾವೇಶ
ಲೋಕದರ್ಶನ ವರದಿ
ಕೊಪ್ಪಳ 25: ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಮಾ. 01ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವೀರಶೈವ ಲಿಂಗಾಯತ ವಧುವರರ ಸಮಾವೇಶ ನಡೆಯಲಿದೆ ಎಂದು ಕನರ್ಾಟಕ ವೀರಶೈವ ವಧು-ವರರ ಆನ್ವೇಷಣಾ ಕೇಂದ್ರದ ಅಧ್ಯಕ್ಷ ಶಿವಕುಮಾರ್ ಹಿರೇಮಠ ಹೇಳಿದರು.
ಅವರು ನಗರದ ಪತ್ರಿಕಾ ಭವನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ರಾಜ್ಯ ಮಟ್ಟದ ವೀರಶೈವ ಲಿಂಗಾಯತ ಹಾಗೂ ಜಂಗಮ ವಧು-ವರರ ಮತ್ತು ಪಾಲಕರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ನಿವೃತ್ತಿ ಅಧಿಕಾರಿ ವೀರೇಶಪ್ಪ ಹಾಳಕೇರಿ. ಕೊಪ್ಪಳ ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಕಳಕನಗೌಡ ಪಾಟೀಲ್ ಆಗಮಿಸಲಿದ್ದಾರೆ. ಸಮಾವೇಶದಲ್ಲಿ ವಧು-ವರರನ್ನು ಪರಸ್ಪರ ಪರಿಚಯ ಮಾಡಿಕೊಡಲಾಗುವುದು. ಆಸಕ್ತ ವಧು-ವರರು ಹಾಗೂ ಪಾಲಕರನ್ನು ಸ್ಥಳದಲ್ಲಿ ಮಾತುಕತೆಗೆ ಅವಕಾಶ ಕಲ್ಪಸಿಕೊಡಲಾಗುವುದು. ಸಮಾವೇಶದಲ್ಲಿ ಭಾಗವಹಿಸಿ ಸದಸ್ಯತ್ವ ಪಡೆದವರಿಗೆ ಮದುವೆ ನಿಶ್ಚಯದ ಮಾಹಿತಿ ಹಾಗೂ ಪರಸ್ಪರ ತೋರಿಸುವ ಸೇವೆ ಮಾಡಲಾಗುವುದು ಎಂದರು.
ವಧು-ವರರು ಒಂದು ಫೋಟೋ ಜಾತಕದೊಂದಿಗೆ ಈ ಸಮಾವೇಶದಲ್ಲಿ ಭಾಗವಹಿಸಿ, ವೀರಶೈವ ಲಿಂಗಾಯತ, ಜಂಗಮ, ಆರಾಧ್ಯರು, ಪಂಚಮಸಾಲಿ, ಬಣಜಿಗ, ಆದಿಬಣಜಿಗ, ಶಿವಾಚಾರ್ಯ ಕುಂಬಾರ, ಸಾದರ, ಲಿಂಗಾಯತ ರೆಡ್ಡಿ, ಹೂಗಾರ, ಸೇರಿದಂತೆ ಎಲ್ಲಾ ಒಳಪಂಗಡಗಳು ಸಕರ್ಾರ, ಅರೆ-ಸಕರ್ಾರಿ ಎಂಜಿನಿಯರ್, ವೈದ್ಯರು, ವ್ಯಾಪಾರಸ್ಥರು, ಉದೋಗಸ್ಥರು ಸೇರಿದಂತೆ ಇತರರು ಭಾಗವಹಿಸುವರು ಇದರ ಸದುಪಯೋಗಪಡಿಸಿಕೊಳ್ಳಲು ಸಮಾಜ ಬಾಂಧವರಲ್ಲಿ ಕೋರಿದರು. ಹೆಚ್ಚಿನ ಮಾಹಿತಿಗಾಗಿ: 9663108606 ಸಂಪಕಿಸಬಹುದಾಗಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 