ಮಳೆಗೆ ಹಾನಿಯಾದ ಪ್ರದೇಶದಲ್ಲಿ ಅಭಿವೃದ್ಧಿಗೆ ಮಾನೆ ಚಾಲನೆ
Maane drive for development in rain damaged area
ಹಾನಗಲ್ 07 :ತಾಲೂಕಿನ ಸುರಳೇಶ್ವರ ಗ್ರಾಮದಲ್ಲಿ 2024-25 ನೇ ಸಾಲಿನ ಮಳೆ ಮತ್ತು ಪ್ರವಾಹದಿಂದ ಹಾನಿಯಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಅಭಿವೃದ್ಧಿ ಕ್ರಿಯಾ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಗುರುಮೂರ್ತಿ ಗೌಡರ ಅವರ ಮನೆಯಿಂದ ಶಿವಪ್ಪ ಪೂಜಾರ ಅವರ ಮನೆವರೆಗೆ ಸಿಸಿರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಮಾನೆ, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಗಮನ ನೀಡಲಾಗಿದೆ. ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಗ್ರಾಪಂ ಸದಸ್ಯರು ಮತ್ತು ಗ್ರಾಮಸ್ಥರು ಈ ನಿಟ್ಟಿನಲ್ಲಿ ಕಾಳಜಿ ವಹಿಸಿದರೆ ಗ್ರಾಮೀಣಾಭಿವೃದ್ಧಿಯ ಕನಸು ಸಾಕಾರಗೊಳ್ಳಲಿದೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಯಂಕಮ್ಮ ಬಂಡಿವಡ್ಡರ,ಉಪಾಧ್ಯಕ್ಷ ನಾಗಪ್ಪ ತಳಗೇರಿ, ಸದಸ್ಯ ರೆಹೆಮತ್ಅಲಿ ನೆಲ್ಲಿಕೊಪ್ಪ, ಮುಖಂಡರಾದ ಪರಸಪ್ಪ ನಾಯ್ಕ, ಬಸವರಾಜ ಮೈಲಾರದ, ಮಹದೇವಪ್ಪ ಬಂಡಿವಡ್ಡರ, ಗಣೇಶ ಸಂಬರಗಿ, ಕಾಸೀಂಸಾಬ ಸಾವಿಕೇರಿ, ಮೆಹಬೂಬ ಬ್ಯಾಡಗಿ, ದೇವೇಂದ್ರ್ಪ ನಾಯ್ಕ, ಯಲ್ಲಪ್ಪ ಸಂಬರಗಿ, ಮೌಲಾಲಿ, ನೂರಖಾನ್ ಶೇತಸನದಿ, ರಾಜೇಸಾಬ ಲಕ್ಷ್ಮೇಶ್ವರ, ಜಗದೀಶ ನಾಯ್ಕ, ಶಿವಪುತ್ರ್ಪ ಬಾರ್ಕಿ,ಪ್ರಕಾಶ ನಾಯಕ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 