ಮಳೆಗೆ ಹಾನಿಯಾದ ಪ್ರದೇಶದಲ್ಲಿ ಅಭಿವೃದ್ಧಿಗೆ ಮಾನೆ ಚಾಲನೆ
Maane drive for development in rain damaged area
ಹಾನಗಲ್ 07 :ತಾಲೂಕಿನ ಸುರಳೇಶ್ವರ ಗ್ರಾಮದಲ್ಲಿ 2024-25 ನೇ ಸಾಲಿನ ಮಳೆ ಮತ್ತು ಪ್ರವಾಹದಿಂದ ಹಾನಿಯಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಅಭಿವೃದ್ಧಿ ಕ್ರಿಯಾ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಗುರುಮೂರ್ತಿ ಗೌಡರ ಅವರ ಮನೆಯಿಂದ ಶಿವಪ್ಪ ಪೂಜಾರ ಅವರ ಮನೆವರೆಗೆ ಸಿಸಿರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಮಾನೆ, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಗಮನ ನೀಡಲಾಗಿದೆ. ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಗ್ರಾಪಂ ಸದಸ್ಯರು ಮತ್ತು ಗ್ರಾಮಸ್ಥರು ಈ ನಿಟ್ಟಿನಲ್ಲಿ ಕಾಳಜಿ ವಹಿಸಿದರೆ ಗ್ರಾಮೀಣಾಭಿವೃದ್ಧಿಯ ಕನಸು ಸಾಕಾರಗೊಳ್ಳಲಿದೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಯಂಕಮ್ಮ ಬಂಡಿವಡ್ಡರ,ಉಪಾಧ್ಯಕ್ಷ ನಾಗಪ್ಪ ತಳಗೇರಿ, ಸದಸ್ಯ ರೆಹೆಮತ್ಅಲಿ ನೆಲ್ಲಿಕೊಪ್ಪ, ಮುಖಂಡರಾದ ಪರಸಪ್ಪ ನಾಯ್ಕ, ಬಸವರಾಜ ಮೈಲಾರದ, ಮಹದೇವಪ್ಪ ಬಂಡಿವಡ್ಡರ, ಗಣೇಶ ಸಂಬರಗಿ, ಕಾಸೀಂಸಾಬ ಸಾವಿಕೇರಿ, ಮೆಹಬೂಬ ಬ್ಯಾಡಗಿ, ದೇವೇಂದ್ರ್ಪ ನಾಯ್ಕ, ಯಲ್ಲಪ್ಪ ಸಂಬರಗಿ, ಮೌಲಾಲಿ, ನೂರಖಾನ್ ಶೇತಸನದಿ, ರಾಜೇಸಾಬ ಲಕ್ಷ್ಮೇಶ್ವರ, ಜಗದೀಶ ನಾಯ್ಕ, ಶಿವಪುತ್ರ್ಪ ಬಾರ್ಕಿ,ಪ್ರಕಾಶ ನಾಯಕ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 