ಮಧು ಮೇಳ: ಜೇನು ಪ್ರದರ್ಶನ, ಮಾರಟಕ್ಕೆ ಅವಕಾಶ
ಕೊಪ್ಪಳ 12: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರ ಸಚಿವರಾದ ಅನಂತಕುಮಾರ್ ಅವರು ನಿಧನರಾಗಿದ್ದು, ಕೊಪ್ಪಳ ತೋಟಗಾರಿಕೆ ಇಲಾಖೆ ಆವರಣದಲ್ಲಿ ಸೋಮವಾರದಂದು ಮೌನಾಚರಣೆಯನ್ನು ಆಚರಿಸಲಾಯಿತು. ಮಧು ಮೇಳ ಕಾರ್ಯಕ್ರಮದ ಉದ್ಘಾಟನೆಯನ್ನು ರದ್ದು ಪಡಿಸಿ, ರೈತರಿಗೆ ಹಾಗೂ ಸಾರ್ವಜನಿಕರ ಅನುಕೂಲವಾಗುವಂತೆ ಜೇನು ಪ್ರದರ್ಶನ ಮತ್ತು ಮಾರಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಯಿತು.
ಕೇಂದ್ರ ಸಚಿವರಾದ ಅನಂತಕುಮಾರ್ ಅವರ ನಿಧನ ಹಿನ್ನೆಲೆ ರಾಜ್ಯ ಸಕರ್ಾರವು ಎಲ್ಲಾ ಸಕರ್ಾರಿ ಕಛೇರಿ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರದಂದು ರಜೆ ಘೋಷಿಸಿದ್ದು, ಅಲ್ಲದೇ ನ. 14 ರವರೆಗೆ ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುತ್ತಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು, ಮನರಂಜನಾ ಕಾರ್ಯಕ್ರಮಗಳನ್ನು ಆಚರಿಸಲಾಗುವುದಿಲ್ಲ ಎಂದು ರಾಜ್ಯ ಸಕರ್ಾರವು ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ತೋಟಗಾರಿಕೆ ಕಛೇರಿ ಆವರಣದಲ್ಲಿ ನ. 12 ರಿಂದ 14 ರವರೆಗ ಆಯೋಜಿಸಲಾದ ಮಧು ಮೇಳ ಉದ್ಘಾಟನಾ ಸಮಾರಂಭವನ್ನು ರದ್ದು ಪಡಿಸಿ, ತಾಂತ್ರಿಕ ಕಾಯರ್ಾಗಾರವನ್ನು ಮುಂದೂಡಿ ರೈತರ ಮತ್ತು ಸಾರ್ವಜನಿಕ ಅನುಕೂಲಕ್ಕಾಗಿ ಜೇನು ಪ್ರದರ್ಶನ ಮತ್ತು ಮಾರಾಟಕ್ಕೆ ಮಾತ್ರ ಅವಕಾಶವನ್ನು ಮಾಡಿಕೊಡಲಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿದರ್ೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 