ಮಧು ಮೇಳ: ಜೇನು ಪ್ರದರ್ಶನ, ಮಾರಟಕ್ಕೆ ಅವಕಾಶ
ಕೊಪ್ಪಳ 12: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರ ಸಚಿವರಾದ ಅನಂತಕುಮಾರ್ ಅವರು ನಿಧನರಾಗಿದ್ದು, ಕೊಪ್ಪಳ ತೋಟಗಾರಿಕೆ ಇಲಾಖೆ ಆವರಣದಲ್ಲಿ ಸೋಮವಾರದಂದು ಮೌನಾಚರಣೆಯನ್ನು ಆಚರಿಸಲಾಯಿತು. ಮಧು ಮೇಳ ಕಾರ್ಯಕ್ರಮದ ಉದ್ಘಾಟನೆಯನ್ನು ರದ್ದು ಪಡಿಸಿ, ರೈತರಿಗೆ ಹಾಗೂ ಸಾರ್ವಜನಿಕರ ಅನುಕೂಲವಾಗುವಂತೆ ಜೇನು ಪ್ರದರ್ಶನ ಮತ್ತು ಮಾರಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಯಿತು.
ಕೇಂದ್ರ ಸಚಿವರಾದ ಅನಂತಕುಮಾರ್ ಅವರ ನಿಧನ ಹಿನ್ನೆಲೆ ರಾಜ್ಯ ಸಕರ್ಾರವು ಎಲ್ಲಾ ಸಕರ್ಾರಿ ಕಛೇರಿ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರದಂದು ರಜೆ ಘೋಷಿಸಿದ್ದು, ಅಲ್ಲದೇ ನ. 14 ರವರೆಗೆ ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುತ್ತಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು, ಮನರಂಜನಾ ಕಾರ್ಯಕ್ರಮಗಳನ್ನು ಆಚರಿಸಲಾಗುವುದಿಲ್ಲ ಎಂದು ರಾಜ್ಯ ಸಕರ್ಾರವು ಅಧಿಸೂಚನೆ ಹೊರಡಿಸಿದೆ. ಆದ್ದರಿಂದ ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ತೋಟಗಾರಿಕೆ ಕಛೇರಿ ಆವರಣದಲ್ಲಿ ನ. 12 ರಿಂದ 14 ರವರೆಗ ಆಯೋಜಿಸಲಾದ ಮಧು ಮೇಳ ಉದ್ಘಾಟನಾ ಸಮಾರಂಭವನ್ನು ರದ್ದು ಪಡಿಸಿ, ತಾಂತ್ರಿಕ ಕಾಯರ್ಾಗಾರವನ್ನು ಮುಂದೂಡಿ ರೈತರ ಮತ್ತು ಸಾರ್ವಜನಿಕ ಅನುಕೂಲಕ್ಕಾಗಿ ಜೇನು ಪ್ರದರ್ಶನ ಮತ್ತು ಮಾರಾಟಕ್ಕೆ ಮಾತ್ರ ಅವಕಾಶವನ್ನು ಮಾಡಿಕೊಡಲಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿದರ್ೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 