ಮದಿಹಾಳ ಸಿದ್ಧಾರೂಢಮಠದ ಜಾತ್ರಾಮಹೋತ್ಸವ
Madihal Siddharudhamath's fair
ಧಾರವಾಡ 24 : ನಗರದ ಮದಿಹಾಳ ಸಿದ್ಧಾರೂಢ ಕಾಲೋನಿಯ ಸಿದ್ಧಾರೂಢಮಠದ 2ನೆಯ ವರ್ಷದ ವಾರ್ಷಿಕ ಜಾತ್ರಾಮಹೋತ್ಸವ ಜ.30 ರಂದು (ಶುಕ್ರವಾರ) ಜರುಗುವುದು. ಜಾತ್ರೆಯ ದಿನ ಪ್ರಾತಃಕಾಲದಲ್ಲಿ ಶ್ರೀಸಿದ್ಧಾರೂಢರ ಹಾಗೂ ಗುರುನಾಥಾರೂಢರ ವಿಗ್ರಹಗಳಿಗೆ ಏಕಾದಶ ಮಹಾರುದ್ರಾಭಿಷೇಕ ನಂತರ ವಿಶೇಷ ಹೋಮ ನಡೆಯಲಿದೆ.
ನೂತನ ರಥ ನಿರ್ಮಾಣ : ಆಧ್ಯಾತ್ಮವಾದಿ, ಅನುಭಾವಿ ನಿವೃತ್ತ ಅಧ್ಯಾಪಕಿ ದಾಕ್ಷಾಯಣಮ್ಮ ಹೂಗಾರ ಅವರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ನೂತನ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ವಿಜಯನಗರ ಜಿಲ್ಲೆ ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ಸಂಜೆ 4-30 ಗಂಟೆಗೆ ರಥೋತ್ಸವವನ್ನು ಉದ್ಘಾಟಿಸುವರು.
ಆಧ್ಯಾತ್ಮ ಪ್ರವಚನ : ರಥೋತ್ಸವದ ನಂತರ ಸಂಜೆ 7 ಗಂಟೆಗೆ ಮಠದ ಆವರಣದಲ್ಲಿ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಧರ್ಮಸಮಾರಂಭದಲ್ಲಿ ಹಂಪಸಾಗರ ನವಲಿಹಿರೇಮಠದ ಶ್ರೀಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಆಧ್ಯಾತ್ಮ ಪ್ರವಚನ ನೀಡುವರು. ವಿಜಯಪುರದ ಹಿರಿಯ ಅನುಭಾವಿ ಸಿದ್ಧಪ್ಪ ಬಿದರಿ ಮಾತನಾಡುವರು. ಜಾತ್ರೆಯ ಅಂಗವಾಗಿ ದಾಸೋಹ ಸೇವೆಯಲ್ಲಿ ಅನ್ನಸಂತರೆ್ಣ ನಡೆಯುವುದು.
ಜ.31 ರಂದು ಮುಂಜಾನೆ 8-30 ಗಂಟೆಗೆ ಶ್ರೀಸಿದ್ಧಾರೂಢರ ಪಲ್ಲಕ್ಕಿ ಉತ್ಸವ, ಸಂಜೆ 5 ಗಂಟೆಗೆ ಮಹಿಳೆಯರ ಸಾಂಸ್ಕೃತಿಕ ಕಾರ್ಯಕ್ರಮಗಳು, 7 ಗಂಟೆಗೆ ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರದ ಕಲಾತಂಡದಿಂದ ಜಾನಪದ ಸಂಜೆ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 