ಮಹಾದಾಯಿ ನೀರಿನ ಬಳಕೆ ಅಧಿಸೂಚನೆ ಸ್ವಾಗತಾರ್ಹ: ಸಚಿವ ಪಾಟೀಲ್
ಗದಗ 28: ಮಲಪ್ರಭಾ ನದಿಗೆ ಕಳಸಾ ಬಂಡೂರಿ ನಾಲೆಗಳ ಜೋಡಣೆಯ ಕಾಮಗಾರಿ ಮತ್ತು ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋಟರ್್ನ ಮಧ್ಯಂತರ ಆದೇಶದಂತೆ ಕೇಂದ್ರ ಸಕರ್ಾರವು ಕನರ್ಾಟಕಕ್ಕೆ 13.42 ಟಿಎಂಸಿ ನೀರು ಸದ್ಭಳಕೆಗೆ ಅಧಿಸೂಚನೆ ಜಾರಿಗೊಳಿಸಿದ್ದು ತುಂಬಾ ಸಂತಸ ತಂದಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದ 4 ಜಿಲ್ಲೆಗಳ 14 ತಾಲ್ಲೂಕಿನ ರೈತರ ಪಾಲಿನ 13.42 ಟಿಎಂಸಿ ನೀರು ಬಳಕೆಗೆ ಅಧಿಸೂಚನೆ ನೀಡಿದ ಕೇಂದ್ರ ಸಕರ್ಾರವರೀ ಭಾಗದ ಜನರ ವಿಶ್ವಾಸವನ್ನು ಸಾಕಾರಗೊಳಿಸಿದೆ. ಇದರಿಂದ ರೈತರಿಗೆ ವರದಾನವಾಗಲಿದ್ದು, ಸಕರ್ಾರ ಅನ್ನದಾತರಿಗೆ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸ ಹುಸಿಯಾಗಲಿಲ್ಲ ಎಂದರು.
ಮಹದಾಯಿ ನದಿ ಯೋಜನೆಯ ಅನುಷ್ಠಾನಕ್ಕಾಗಿ 2020-21ನೇ ಸಾಲಿನ ಮುಂಗಡ ಪತ್ರದಲ್ಲಿ ಅಗತ್ಯ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಸಕರ್ಾರ ಯೋಜನೆಗಾಗಿ ಅನುದಾನ ಬಿಡುಗಡೆ ಮಾಡಲಿದೆ ಎಂದು ಸಚಿವ ಸಿ.ಸಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಅನಿಲ್ ಮೆಣಸಿನಕಾಯಿ, ರಾಜು ಕುರುಡಗಿ, ವಸಂತ್ ಮೇಟಿ ಹಾಗೂ ಇತರ ಗಣ್ಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 