ಮಹದಾಯಿ ನದಿ ಸ್ಥಳ ಪರಿಶೀಲನೆ: ಡಿಕೆಶಿ
ಬೆಂಗಳೂರು 28: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಮಹದಾಯಿ ನದಿ ಸ್ಥಳ ಪರಿಶೀಲನೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಭೆ ನಡೆಸಲಾಗುವುದು ಎಂದರು.
ಮಹದಾಯಿ ವಿಚಾರದಲ್ಲಿ ರಾಜ್ಯ ಸಕರ್ಾರ ಕೈಗೊಳ್ಳಬೇಕಾಗಿರುವ ಹೋರಾಟ ಕುರಿತಂತೆ ಮುಖ್ಯಮಂತ್ರಿಯೊಂದಿಗೆ ನಡೆಸುವ ಸಭೆಯಲ್ಲಿ ಚಚರ್ೆ ಮಾಡಲಾಗುವುದು. ಆನಂತರ ಮುಂದಿನ ಹೋರಾಟದ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಬೇರೆ ರಾಜ್ಯದ ಬಗ್ಗೆ ತಮಗೆ ಮಾಹಿತಿ ಇಲ್ಲ. ಆದರೆ, ಕನರ್ಾಟಕಕ್ಕೆ ಮಹದಾಯಿ ವಿಚಾರದಲ್ಲಿ ಅನ್ಯಾಯವಾಗಿದೆ. ನೆರೆಯ ಗೋವಾ ರಾಜ್ಯ ಏನಾದರು ಮಾಡಿಕೊಳ್ಳಲಿ. ನಾವು ನಮ್ಮ ರಾಜ್ಯದ ಹಿತ ಕಾಪಾಡಲು ಬದ್ಧ. ಇದಕ್ಕಾಗಿ ಯಾವುದೇ ತ್ಯಾಗಕ್ಕಾದರೂ ಸಿದ್ದರಿರುವುದಾಗಿ ಸಚಿವರು ಹೇಳಿದರು.
ಕಾನೂನು ಹೋರಾಟಕ್ಕೂ ನಾವು ಸಿದ್ದರಿದ್ದು, ಎಲ್ಲ ಪಕ್ಷದ ಮುಖಂಡರು ರಾಜ್ಯದ ಹಿತ ಕಾಪಾಡಲು ಮುಂದಾಗಬೇಕು. ಮಹದಾಯಿ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡುವುದು ಬೇಡ. ಎಲ್ಲರು ಒಟ್ಟಾಗಿ ಹೋರಾಟವನ್ನು ಮುಂದುವರೆಸೋಣ ಎಂದು ವಿರೋಧ ಪಕ್ಷಗಳಿಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 