ತ್ರಿವರ್ಣ ಸೀರೆಯ ಮಹಾಲಕ್ಷ್ಮೀಯ ಪೂಜೆ
Mahalakshmi Puja in Tricolor Saree
ಜಮಖಂಡಿ : 27-2 ತಾಲೂಕಿನ ಮುತ್ತೂರು ಗ್ರಾಮದ ಅಧಿದೇವತೆ ಮಹಾಲಕ್ಷ್ಮೀಯನ್ನು ಗಣರಾಜ್ಯೋತ್ಸವದ ಪ್ರಯುಕ್ತ ತ್ರಿವರ್ಣ ಸೀರೆಯ ಅಲಂಕಾರದೊಂದಿಗೆ ಪೂಜಿಸಲಾಗಿತ್ತು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಷಫರ್ಡ್ ವಿಜ್ಞಾನ ಪಿಯು ಕಾಲೇಜಿನ ಆಡಳಿತಾಧಿಕಾರಿ ಹಾಗೂ ದೇವಿಯ ಭಕ್ತರಾಗಿರುವ ಅಮೀತಗೌಡ ಪಾಟೀಲ ಅವರು ಕಳೆದ 3 ವರ್ಷಗಳಿಂದ ಆಗಸ್ಟ 15 ಹಾಗೂ ಜನೇವರಿ 26ಕ್ಕೆ ಶ್ರೀದೇವಿಗೆ ತ್ರಿವರ್ಣ ಧ್ವಜದ ಅಲಂಕಾರ ಮಾಡಿಸಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.
ಭಕ್ತರ ಕೋರಿಕೆಯಂತೆ ದೇವಿಯನ್ನು ತ್ರಿವರ್ಣ ಸೀರೆಯಿಂದ ಅಲಂಕರಿಸಲಾಗುತ್ತದೆ ಎಂದು ಅರ್ಚಕ ಸುರೇಶ್ ಆರ್,ಜಿ, ತಿಳಿಸಿದರು. ಶ್ರೀದೇವಿಯ ಅಲಂಕಾರ ವಿಶೇಷ ಪೂಜೆಗಳು ನಡೆದವು. ದೈವಿಭಕ್ತಿಯ ಜೊತೆಗೆ ದೇಶಭಕ್ತಿಯ ಅನನ್ಯ ಸಂಗಮವಾಗಿತ್ತು. ಇತಿಹಾಸ ಪರಂಪರೆ ಹೊಂದಿರುವ ಮುತ್ತೂರು ಮಹಾಲಕ್ಷ್ಮೀ ದೇವಿಗೆ ತ್ರಿವರ್ಣ ಧ್ವಜವನ್ನು ಹೋಲುವ ವಿಶೇಷ ಸೀರೆ ಅಲಂಕಾರದಲ್ಲಿ ಕಂಗೊಳಿಸಿದಳು. ದೇವಿಯಲ್ಲಿ ಭಾರತಾಂಬೆಯ ಪ್ರತಿರೂಪ ಕಾಣಲು ಭಕ್ತ ಸಾಗರವೇ ಹರಿದು ಬಂದಿತ್ತು. ವಿಶೇಷ ಪೂಜೆಗಳ ಕಾರ್ಯಕ್ರಮಗಳು ನಡೆದವು. ಅರ್ಚಕ ಹನುಮಂತ ಗುರುವ ತಂಡದವರು ದೇವರನ್ನು ಅಲಂಕರಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 