ಮಹಾರಾಷ್ಟ್ರ : ಆತ್ಮಹತ್ಯೆಗೆ ಯತ್ನಿಸಿದ ಸತ್ಯಶೋಧಕ ಸೇನಾ ನಾಯಕಿ
ಔರಂಗಾಬಾದ್, ಜೂನ್ 13,ರಾಜ್ಯ ಕೈಗಾರಿಕಾ ಸಚಿವ ಸುಭಾಸ್ ದೇಸಾಯಿ ಅವರ ಕಾರಿನ ಮುಂದೆ ಸತ್ಯಶೋದಕ ಸೇನಾ ಮಹಿಳಾ ಜಿಲ್ಲಾ ಮುಖ್ಯಸ್ಥೆ ಆಮ್ರಪಾಲಿ ಹಿವಾಲೆ ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶೆಂದ್ರಾ ಡಿಎಂಐಸಿ ಪ್ರದೇಶದಲ್ಲಿ ಎರಡು ಖಾಸಗಿ ಥರ್ಮಾಕೋಲ್ ಘಟಕ ಸ್ಥಾಪನೆ ವಿರೋಧಿಸಿ ಹಿವಾಲೆ ಸಚಿವರೆದುರು ಪ್ರತಿಭಟಿಸುವ ಸಂದರ್ಭದಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಸಚಿವ ಸುಭಾಸ್ ದೇಸಾಯಿ ಶುಕ್ರವಾರ ಕೋವಿಡ್ 19 ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಈ ಅಚಾತುರ್ಯ ಜರುಗಿದೆ. ಡಿಎಂಐಸಿಯಲ್ಲಿ ಸ್ಥಾಪನೆಯಾಗಿರುವ ಥರ್ಮಾಕೋಲ್ ಕಂಪನಿಗಳಿಂದಾಗಿ ಈ ಪ್ರದೇಶದ ನಿವಾಸಿಗಳ ಆರೋಗ್ಯಕ್ಕೆ ಅಪಾಯವಿದೆ ಎಂದು ಆರೋಪಿಸಿದ ಹಿವಾಲೆ, ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಲ್ಲಿಸಿದ್ದ ಸಚಿವರ ಕಾರಿನ ಮುಂದೆ ಮಲಗಿ ಪ್ರತಿಭಟಿಸಿದರು. ಈ ಹಠಾತ್ ಘಟನೆಯು ಗದ್ದಲಕ್ಕೆ ಕಾರಣವಾಯಿತು. ಕೊನೆಗೆ ಪೊಲೀಸರು ಮಹಿಳೆಯನ್ನು ವಶಕ್ಕೆ ತೆಗೆದುಕೊಂಡು, ಅನಾಹುತವನ್ನು ತಪ್ಪಿಸಲಾಯಿತು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 