ಮಹಾರಾಷ್ಟ್ರ: ಶಿವಸೇನೆ ಪರ ಶರದ್ ಪವಾರ್ ಬ್ಯಾಟಿಂಗ್
ಮುಂಬೈ, ಅ. 26: ಮಹಾರಾಷ್ಟ್ರದಲ್ಲಿ 50:50ರ ಸೂತ್ರಕ್ಕೆ ಒಪ್ಪಿದರೆ ಮಾತ್ರ ಸರ್ಕಾರ ರಚನೆಗೆ ಬೆಂಬಲ ನೀಡುವುದಾಗಿ ಶಿವಸೇನೆ ಹೇಳುತ್ತಿರುವುದರಲ್ಲಿ ಯಾವ ತಪ್ಪು ಕಾಣುತ್ತಿಲ್ಲ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿ ಸೇನಾ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಈ ಹಿಂದೆಯೂ ಶಿವಸೇನೆ-ಬಿಜೆಪಿ ಮೈತ್ರಿ 50:50ರ ಸೂತ್ರದ ಒಪ್ಪಂದದ ಮೇರೆಗೆ ಸರ್ಕಾರ ರಚಿಸಿದೆ. ಹಾಗೆಯೇ ಇದೀಗ ಮತ್ತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಳಿ ಉದ್ದವ್ ಠಾಕ್ರೆ 50:50 ಸೂತ್ರದ ಬೇಡಿಕೆಯ ಆಧಾರದಲ್ಲಿ ಒತ್ತಡ ಹಾಕಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಿವಸೇನೆ ಪರ ಶರದ್ ಪವಾರ್ ಗಟ್ಟಿಯಾಗಿ ನಿಂತಿದ್ದಾರೆ. ಇನ್ನು ಕಾಂಗ್ರೆಸ್-ಎನ್ಸಿಪಿ ಮೈತ್ರಿಯೂ 102 ಸೀಟು ಪಡೆದುಕೊಂಡಿದೆ. ಬಿಜೆಪಿ-ಶಿವಸೇನೆ ಮೈತ್ರಿಕೂಟ 220 ಸೀಟು ಗೆಲ್ಲುವ ಗುರಿ ಹೊಂದಿತ್ತು. ಆದರೆ, ಕಾಂಗ್ರೆಸ್ನೊಂದಿಗೆ ಎನ್ಸಿಪಿ ಚುನಾವಣೆ ಗೆಲ್ಲಲು ಭಾರೀ ಶ್ರಮಿಸಿದ್ದೇವೆ. ಇದರಿಂದಲೇ ಬಿಜೆಪಿ-ಶಿವಸೇನೆ ಮೈತ್ರಿಗೆ 220 ಸೀಟು ಗೆಲ್ಲಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಸದ್ಯ ಮಹಾರಾಷ್ಟ್ರದಲ್ಲಿ ಸುಲಭವಾಗಿ ಸರ್ಕಾರ ರಚಿಸಬಹುದು ಎಂಬ ಬಿಜೆಪಿ ನಿರೀಕ್ಷೆ ಸುಳ್ಳಾಗಿದೆ. ಇತ್ತ 50:50 ಸೂತ್ರಕ್ಕೆ ಒಪ್ಪಿಗೆ ಸೂಚಿಸಿದರೆ ಮಾತ್ರ ಸರ್ಕಾರ ರಚನೆ ಮಾಡಲು ಬೆಂಬಲ ನೀಡುವುದಾಗಿ ಶಿವಸೇನೆ ಹೊಸ ದಾಳ ಉರುಳಿಸಿದೆ. ಈ ಸೂತ್ರದ ಪ್ರಕಾರ 5 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ಇಬ್ಬರು ಮುಖ್ಯಮಂತ್ರಿಗಳನ್ನು ಮಾಡಬೇಕಾಗುತ್ತದೆ. ಅಂತೆಯೇ ಎರಡೂವರೆ ವರ್ಷ ಶಿವಸೇನೆ ಅಭ್ಯರ್ಥಿ ಸಿಎಂ ಆದರೆ, ಇನ್ನುಳಿದ ಅವಧಿಗೆ ಬಿಜೆಪಿ ಅಭ್ಯರ್ಥಿ ಮುಖ್ಯಮಂತ್ರಿ ಆಗಬಹುದಾಗಿದೆ ಎಂದು ಪವಾರ್ ಹೇಳಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 