ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಮೇಲೆ ಶಿವಸೇನೆ ಕಣ್ಣು
ಮುಂಬೈ, ಅ 24: ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿದಂತೆ ಅಧಿಕಾರಕ್ಕಾಗಿ ಎರಡೂ ಪಕ್ಷಗಳ ನಡುವೆ ಹಗ್ಗ ಜಗ್ಗಾಟ, ಸಂಘರ್ಷ ಕಾಣಿಸಿಕೊಳ್ಳುವ ಸಾಧ್ಯತೆ ಎದುರಾಗಿದೆ.
ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಈ ಬಾರಿ, ಈ ಹುದ್ದೆಯನ್ನು ಬಿಜೆಪಿಗೆ ಸುಲಭವಾಗಿ ಬಿಟ್ಟುಕೊಡುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅಧಿಕಾರ ಹಂಚಿಕೆ ವಿಚಾರದಲ್ಲಿ ಜಟಾಪಟಿ ನಡೆಯುವ ಸಾಧ್ಯತೆಯೂ ಕಂಡು ಬಂದಿದೆ. ಬಿಜೆಪಿ ಹೇಳಿದಂತೆ ನಾವು ಕೇಳಲು ಆಗುವುದಿಲ್ಲ. ಅಧಿಕಾರದಲ್ಲಿ ನಮಗೆ ಸಮಪಾಲು ಬೇಕೇ ಬೇಕು ಎಂದು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ನಾಯಕರ ಬಳಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೇ ಮೊದಲ ಬಾರಿಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಕುಟುಂಬದ ಸದಸ್ಯರು ಚುನಾವಣಾ ಕಣಕ್ಕೆ ಧುಮುಕಿದ್ದಾರೆ.
ಮುಂಬೈ ನ ವಲರ್ಿ ಕ್ಷೇತ್ರದಿಂದ ಆದಿತ್ಯ ಠಾಕ್ರೆ ಸ್ಪರ್ಧೆ ಮಾಡಿದ್ದು, ಅವರನ್ನೇ ಶಿವಸೇನಾ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಕೂಗು, ಒತ್ತಡ ಶಿವಸೇನೆಯಲ್ಲಿ ಹೆಚ್ಚಾಗಿದೆ. ಒಟ್ಟಾರೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಗೆಲುವು ಸಾಧಿಸಿದ್ದರೂ ಅಧಿಕಾರ ಹಂಚಿಕೆ ಸುಗಮವಾಗಿ ನಡೆಯುತ್ತದೆ ಎಂಬ ಆಶಾಭಾವನೆ ಸದ್ಯಕ್ಕಂತೂ ಕಾಣುತ್ತಿಲ್ಲ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 