ಮಹಾರಾಷ್ಟ್ರ : ಬಿಜೆಪಿ ಸರ್ಕಾರ ಬಹುತೇಕ ಖಚಿತ
ಮುಂಬೈ, ನ 7: ಯಾವುದೇ ಕಾರಣಕ್ಕೂ ಶಿವಸೇನೆಗೆ ಬೆಂಬಲ ನೀಡುವುದಿಲ್ಲ ಎಂದು ಎನ್ ಸಿ ಪಿ ಮತ್ತು ಕಾಂಗ್ರೆಸ್ ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗುವುದು ಬಹುತೇಕ ನಿಶ್ಚಿತವಾಗಿದೆ. ಗುರುವಾರ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ವಿಧಿಬದ್ಧವಾಗಿ ಹಕ್ಕು ಮಂಡಿಸುವುದರೊಂದಿಗೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೋಚಕ ಮತ್ತು ನಾಟಕೀಯ ವಿದ್ಯಮಾನಗಳು ಕೊನೆಗೊಳ್ಳುವ ಹಂತಕ್ಕೆ ಬಂದಿವೆ. ಈಗ ಬಿಜೆಪಿಗೆ ಶಿವಸೇನೆ ಅನಿವಾರ್ಯವಾಗಿದ್ದು, ಅದೇ ರೀತಿ ಶಿವಸೇನೆಗೂ ಬಿಜೆಪಿ ಅಗತ್ಯವಿದೆ. ಬೇರೆ ಅವಕಾಶಗಳು ಇಲ್ಲದೇ ಇರುವ ರಾಜಕೀಯ ಸ್ಥಿತಿ ಎದುರಾಗಿದೆ. ಹೀಗಾಗಿ ಇನ್ನು ಒಂದೆರಡು ದಿನಗಳಲ್ಲಿ ರಾಜ್ಯದಲ್ಲಿ ಭಾ ಜ ಪ ನೇತೃತ್ವದ ಸರ್ಕಾರ ರಚನೆಯಾಗುವುದು ಖಚಿತ ಎಂಬ ವಿಶ್ವಾಸ ಬಿಜೆಪಿ ನಾಯಕರಲ್ಲಿ ಮನೆ ಮಾಡಿದೆ. ಹಾಲಿ ವಿಧಾನಸಭೆಯ ಅವಧಿ ಇದೇ ಶನಿವಾರ ನ 9 ಕ್ಕೆ ಮುಕ್ತಾಯವಾಗಲಿದ್ದು ಹೊಸ ರಾಜಕೀಯ ಬೆಳವಣಿಗೆಗಳ ಪ್ರಕಾರ ಆ ವೇಳೆಯೊಳೆಗೆ ಹೊಸ ಸರ್ಕಾರ ರಚನೆಯಾಗುವ ಆಶಾದಾಯಕ ಪರಿಸ್ಥಿತಿ ಕಂಡು ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿಲ್ಲ. ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಮಿತ್ರಪಕ್ಷ ಶಿವಸೇನೆಯೊಂದಿಗೆ ಕೂಡಿ ಸರ್ಕಾರ ರಚನೆ ಮಾಡುವಷ್ಟು ಸರಳ ಬಹುಮತವನ್ನು ಗಳಿಸಿಕೊಂಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 