ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕನ್ನಡಿಗರು, ಲಿಂಗಾಯತರನ್ನು ಸೆಳೆಯಲು ಯಡಿಯೂರಪ್ಪ ಪ್ರಚಾರ
ಬೆಂಗಳೂರು, ಅ.15: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಪಕ್ಷದ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ ಮತದಾರರನ್ನು ಸೆಳೆಯಲಿದ್ದಾರೆ. ಮಹಾರಾಷ್ಟ್ರಕ್ಕೆ ನಾಳೆ ಯಡಿಯೂರಪ್ಪ ಹೊರಡಲಿದ್ದಾರೆ. ಬುಧವಾರ ಅವರು ಸಾಂಗ್ಲಿ, ಸೋಲಾಪುರ, ಅಕ್ಕೋಲಕೊಟ್, ಚಾಕೂರು, ಲಾತೂರು ಎಂಬಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ತಿಳಿಸಿದೆ. ಗುರುವಾರ ಕಲಬುರಗಿಯ ಗಂಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ರಾಜ್ಯ ರಾಜಧಾನಿಗೆ ಹಿಂದಿರುಗಲಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮತ್ತು ಲಿಂಗಯತರನ್ನು ಸೆಳೆಯಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಪ್ರಚಾರಕ್ಕೆ ಮತ್ತೋರ್ವ ಲಿಂಗಾಯತ ನಾಯಕರಾದ ಉಪ ಮುಖ್ಯಮಂತ್ರಿಗಳಾದ ಲಕ್ಷ್ಣಣ್ ಸವದಿ ಅವರನ್ನೂ ಕಳುಹಿಸಲಿದೆ. ಅದೇ ರೀತಿ ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವಥ್ ನಾರಾಯಣ್ ಅವರನ್ನೂ ಪ್ರಚಾರಕ್ಕೆ ಇಳಿಸಲಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 