ಮಹಾರಾಷ್ಟ್ರ ಚುನಾವಣೆ: ತಾರಕಕ್ಕೆ ಏರಿದ ಚುನಾವಣಾ ಪ್ರಚಾರದ ಕಾವು
ಮುಂಬೈ,ಅ 10: ರಾಜ್ಯ ವಿಧಾನಸಭೆಯ ಚುನಾವಣಾ ಪ್ರಚಾರದ ಕಾವು ದಿನೇ , ದಿನೇ ಬಿರುಸುಗೊಳ್ಳುತ್ತಿದೆ. ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಶರದ್ ಪವಾರ್ ಸೇರಿದಂತೆ ರಾಜಕೀಯ ದಿಗ್ಗಜರು ರಾಜ್ಯದ ಅನೇಕ ಕಡೆ ಬಿರುಸಿನ ಪ್ರಚಾರ ನಡೆಸಲಿದ್ದು ಒಟ್ಟಾರೆ ಪ್ರಚಾರ ತಾರಕ್ಕಕೆ ಮುಟ್ಟಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ನಾಲ್ಕು ಕಡೆ ಚುನಾವಣಾ ಸಭೆ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ಅವರು ನಾಲ್ಕು ಕಡೆ, ಎನ್ ಸಿಪಿ ನಾಯಕ ಶರದ್ ಪವಾರ್ ಮೂರು ಕಡೆಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಶಿವಸೇನೆ ಮುಖ್ಯಸ್ಥ ಉದ್ದವ ಠಾಕ್ರೆ ಅವರು ರಾಜ್ಯದ ಆರು ಸ್ಥಳಗಳಲ್ಲಿ ಚುನಾವಣಾ ಸಭೆಯನ್ನು ಉದ್ಧೇಶಿಸಿ ಪ್ರಚಾರ ಮಾಡಲಿದ್ದಾರೆ. ಇದರ ಜೊತೆಗೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷರು 5 ಕಡೆ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದು ಒಟ್ಟಾರೆ ಪ್ರಚಾರದ ಅಬ್ಬರ ಜೋರಾಗಿದೆ. ಇದೆ 19 ರಂದು ಬಹಿರಂಗ ಚುನಾವಣಾ ಪ್ರಚಾರ ಕೊನೆಯಾಗಲಿದ್ದು ಇದೇ 21 ರಂದು ಮತದಾನ ನಡೆಯಲಿದೆ, 24 ರಂದು ಮತ ಎಣಿಕೆ ನಡೆದು ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 