ಮಹರ್ಷಿ ವಾಲ್ಮೀಕಿಯ ಭವ್ಯ ಮೆರವಣಿಗೆ
Maharishi Valmiki's grand procession
ಲೋಕದರ್ಶನ ವರದಿ
ಮಹರ್ಷಿ ವಾಲ್ಮೀಕಿಯ ಭವ್ಯ ಮೆರವಣಿಗೆ
ಕಂಪ್ಲಿ 13 : ತಾಲೂಕಿನ ದೇವಸಮುದ್ರ ಗ್ರಾಮದಲ್ಲಿ ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಡಗರ ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು. ಇಲ್ಲಿನ ಎದುರು ಬಸವಣ್ಣದಿಂದ ಆರಂಭಗೊಂಡ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ದ್ಯಾವಮ್ಮ ಗುಡಿವರೆಗೆ ತೆರಳಿ, ತದನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳ್ಳದ ಬಳಿಯಲ್ಲಿರುವ ವಾಲ್ಮೀಕಿ ಪುತ್ಥಳಿಯಲ್ಲಿ ಸಮಾವೇಶಗೊಂಡಿತು. ಸುಮಂಗಲಿಯರ ಕುಂಭ, ಕಳಸ, ತಾಷಾರಾಂಡೋಲ್, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ಸೋಮಲಾಪುರ ಹಗಲುವೇಷಧಾರಿಗಳ ತಂಡದ ಪ್ರದರ್ಶನ ಮೆರವಣಿಗೆ ಮೆರಗು ನೀಡುವ ಜೊತೆಗೆ ಜನರ ಆಕರ್ಷಣೆಗೆ ಪಾತ್ರರಾದರು. ಮೆರವಣಿಗೆಯದ್ದಕ್ಕೂ ಯುವಕರು ಕುಣಿದು ಸಂಭ್ರಮಿಸಿದರು. ತದನಂತರ ಗ್ರಾಪಂ ಸದಸ್ಯ ನಾಯಕರ ವೆಂಕೋಬ ಮಾತನಾಡಿ, ರಾಮಾಯಣ ಮಹಾಕಾವ್ಯದ ಮೂಲಕ ವಾಲ್ಮೀಕಿ ಮಹಾಕವಿಯು ಇಡೀ ಜಗತ್ತಿಗೆ ಸ್ವಾತಂತ್ರ್ಯ, ಸಮಾನತೆ ಹಾಗೂ ಸೋದರತೆಯ ಸಂದೇಶ ನೀಡಿದ್ದಾರೆ. ವಾಲ್ಮೀಕಿ ತತ್ವಜ್ಞಾನಿಯಾಗಿ, ಮಾನವೀಯ ಮೌಲ್ಯಗಳ ಹರಿಕಾರನಾಗಿ ಕಾಣುತ್ತಾರೆ. ಇವರ ಜೀವನವೇ ಪ್ರಗತಿಯ ಹಾದಿಯಲ್ಲಿ ಹಾಗೂ ಅರಿವಿನ ಮಾರ್ಗದಲ್ಲಿ ಸಾಗಿದೆ’. ಪ್ರತಿ ವರ್ಷದಂತೆ ಈ ವರ್ಷವೂ ಸಹ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಾಯಮ್ಮ, ಮುಖಂಡರಾದ ಹೊನ್ನೂರ್ಪ, ಯಂಕೋಬಣ್ಣ, ನಾಗಪ್ಪ, ಗಾದಿಲಿಂಗಪ್ಪ, ತಿಪ್ಪಯ್ಯ, ದುರುಗಯ್ಯ, ವಿರುಪಣ್ಣ, ಮುದಿಯಪ್ಪ, ದೊಡ್ಡನಾಯಕ, ಹೇಮಯ್ಯ, ವಡ್ಡಿನ ಪಕ್ಕೀರ್ಪ, ದೇವರಮನೆ ಕರಿಯಪ್ಪ, ಕಮಲಪುರ ಹೊನ್ನೂರ್ಪ, ತಿಮ್ಮಲಾಪುರ ಶಿವಣ್ಣ, ಮರಿಯಪ್ಪ, ಕೆಂಪು ವೆಂಕೋಬ, ನೆಲ್ಲುಡಿ ಬಸಪ್ಪ ಸೇರಿದಂತೆ ಮಹಿಳೆಯರು, ಯುವಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 