ಮಹರ್ಷಿ ವಾಲ್ಮೀಕಿಯ ಚಿಂತನೆಗಳು ಸರ್ವಕಾಲಕ್ಕೂ ಮಾದರಿ: ಕುದುರಿಸಾಲವಾಡಗಿ
Maharishi Valmiki's thoughts are a model for all times: Kudurisalavadagi
ಮಹರ್ಷಿ ವಾಲ್ಮೀಕಿಯ ಚಿಂತನೆಗಳು ಸರ್ವಕಾಲಕ್ಕೂ ಮಾದರಿ: ಕುದುರಿಸಾಲವಾಡಗಿ
ದೇವರಹಿಪ್ಪರಗಿ 07: 24000 ಶ್ಲೋಕಗಳ ಮೂಲಕ ರಾಮಾಯಣವನ್ನು ರಚಿಸಿ ಇಡೀ ನಾಡಿಗೆ ಶ್ರೀರಾಮನ ಆದರ್ಶ ಗುಣಗಳನ್ನು ಪರಿಚಯಿಸಿದ ಮಹರ್ಷಿ ವಾಲ್ಮೀಕಿಯ ಚಿಂತನೆಗಳು ಸರ್ವಕಾಲಕ್ಕೂ ಮಾದರಿಯಾಗಿವೆ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಹೇಳಿದರು.ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ತಹಶೀಲ್ದಾರರ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ತಹಶೀಲ್ದಾರ ಪ್ರಕಾಶ ಸಿಂದಗಿ ಅವರು ಮಾತನಾಡುತ್ತಾ ಮನಪರಿವರ್ತನೆ ಹೊಂದಿ ಸತ್ಸಂಗದ ಮಾರ್ಗವನ್ನು ಅನುಸರಿಸಿ,ಸೀತಾಮಾತೆ ಹಾಗೂ ಲವಕುಶರಿಗೆ ಆಶ್ರಯದಾತರಾಗಿದ್ದ ವಾಲ್ಮೀಕಿಯವರು ಒಬ್ಬ ಶ್ರೇಷ್ಠ ಸಂತ ಹಾಗೂ ಕವಿ ಎನಿಸಿಕೊಂಡಿದ್ದರು ಎಂದು ಹೇಳಿದರು. ಶಿರಸ್ತೇದಾರ ಸುರೇಶ ಮ್ಯಾಗೇರಿ ಹಾಗೂ ಶಿಕ್ಷಕ ಜಿ ಪಿ ಬಿರಾದಾರ ಮಾತನಾಡಿದರು.ತಾಲ್ಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಭಾರತಿ. ಚಲುವಯ್ಯ, ಪಿಎಸ್ಐ ಸಚಿನ ಆಲಮೇಲಕರ, ಪಟ್ಟಣ ಪಂಚಾಯತ ಅಧ್ಯಕ್ಷರ ಪ್ರತಿನಿಧಿ ಬಸು ದೇವಣಗಾಂವ, ಪಟ್ಟಣ ಪಂಚಾಯತ ಸದಸ್ಯ ಕಾಸುಗೌಡ ಬಿರಾದಾರ,ಕಾಸು ಜಮಾದಾರ,ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ ಯಲಗಾರ, ಸರ್ವೇಶ ಆಲಮೇಲ, ನಾನಾಗೌಡ ಸಿದರೆಡ್ಡಿ, ಅಪ್ಪಾಜಿ ದೇಸಾಯಿ, ವಿರೇಶ ಕುದರಿ,ಸುನೀಲ ಮಾಗಿ, ಚನ್ನಬಸು ಹೊಸಮನಿ, ರಾಜು ಕಂಠಿ,ಗೊಲ್ಲಾಳ ರೋಡಗಿ, ರಮಾನಂದ ಚಕ್ಕಡಿ, ಸದ್ದಾಂ ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಾಲ್ಮೀಕಿಯ ಮಹರ್ಷಿಗಳ ಅಭಿಮಾನಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 