ಗ್ರಾಮದ ಮುಖಂಡರಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
Maharishi Valmiki Jayanti celebrated by village leaders
ಲೋಕದರ್ಶನ ವರದಿ
ಗ್ರಾಮದ ಮುಖಂಡರಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಯಮಕ್ಕನಮರಡಿ 07: ಸಮೀಪದ ಆರ್ ಸಿ ಯಮಕ್ಕನಮರಡಿ ಗ್ರಾಮದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಮುಖಂಡರು ಹಾಗೂ ಯುವ ದೂರಿಣರು ಆದ ರವೀಂದ್ರ ಜಿಂದ್ರಾಳಿ ಅವರು ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮದ ಮದಕರಿ ನಾಯಕ ವಾಲ್ಮೀಕಿ ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಗ್ರಾಮದ ಮಾಜಿ ತಾಪಂ ಅಧ್ಯಕ್ಷರಾದ ದಸ್ತಗಿರ್ ಬಸಾಪೂರಿ ರಾಜು ಹಿರೇಮಠ ಸೇರಿದಂತೆ ಮಹಿಳಾಮಂಡಲದ ಸದಸ್ಯರು ಹಾಗೂ ವಾಲ್ಮೀಕಿ ಸಮುದಾಯದ ಸರ್ವ ಮುಖಂಡರು ಯುವಕಮಂಡಲದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಪತ್ರಕರ್ತರಾದ ಗೋಪಾಲ ಚೆಪ್ಪನಿ ಮಾತನಾಡಿದರು. ಅದರಂತೆ ಯುವ ಮುಖಂಡರಾದ ರವೀಂದ್ರ ಜಿನರಾಳಿ ಮಾತನಾಡುತ್ತಾ ಪ್ರತಿ ವರ್ಷವೂ ಉತ್ಸಾಹಪೂರ್ವಕವಾಗಿ ಜಯಂತಿಯನ್ನು ಆಚರಿಸಲು ಯುವಕರು ಮುಂದೆ ಬರಬೇಕೆಂದು ಹೇಳಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 