ಹುಬ್ಬಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು

ಹುಬ್ಬಳ್ಳಿ 17: ದಿ. 17- ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕಛೇರಿ, ಹುಬ್ಬಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಭಾ.ಆ.ಸೇ, ರವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯಾದ ಪಿ ಆರ್ ಕಿರಣಗಿ ರವರು ಮಹರ್ಷಿ ವಾಲ್ಮೀಕಿ ಯವರು ರಚಿಸಿದ ರಾಮಾಯಣವು ಇಡೀ ಜಗತ್ತಿಗೆ ಆದರ್ಶ ಹಾಗೂ ಸಾಂಸ್ಕೃತಿಕ ಮೌಲ್ಯವನ್ನು ತಿಳಿಸುವ ಶ್ರೇಷ್ಠ ಮಹಾಕಾವ್ಯವಾಗಿದೆ. ಎಂದರು. ಸಾಮಾನ್ಯ ಬೇಟೆಗಾರನಾಗಿದ್ದ ರತ್ನಾಕರನು ಮಹರ್ಷಿ ವಾಲ್ಮೀಕಿಯಾದ ಬಗೆಯನ್ನು ಸವಿಸ್ತಾರವಾಗಿ ತಿಳಿಸಿ ಮಹಾಪುರುಷರ ಜಯಂತಿ ಆಚರಣೆಯ ಮೂಲಕ ಅವರ ಆದರ್ಶ, ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಇಲಾಖಾ ಮುಖ್ಯಸ್ಥರಾದ ಪಿ.ವೈ.ನಾಯಕ, ವಿಜಯಶ್ರೀ ನರಗುಂದ, ಗಣೇಶ ಎಲ್ ರಾಠೋಡ, ಬಸವರಾಜ ಅಮ್ಮನವರ, ಮಾಲತಿ ಎಸ್ ಎಸ್ ಹಾಗೂ ಶ್ರೀನಾಥ ಜಿ. ರವರು ಮತ್ತು ಸಂಸ್ಥೆಯ ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು. ಸುನೀಲ ಪತ್ರಿ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಸದರಿ ಸುದ್ಧಿಯನ್ನು ಸಾರ್ವಜನಿಕರ ಗಮನಕ್ಕೆ ಬರುವಂತೆ ಜಿಲ್ಲೆಯ ಎಲ್ಲಾ ಜನಪ್ರಿಯ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ಸಾರ್ವಜನಿಕ ಸುದ್ಧಿ ಎಂದು ಪ್ರಕಟಿಸಲು ಈ ಮೂಲಕ ಕೋರಲಾಗಿದೆ.