ತಡವಲಗಾದಲ್ಲಿ ಮಹಾಶಿವರಾತ್ರಿ ಅದ್ದೂರಿಯಾಗಿ ಆಚರಣೆ
Mahashivratri celebrated in Tadavalaga with grandeur
ಇಂಡಿ 15: ಮಹಾಶಿವರಾತ್ರಿ ಹಬ್ಬದ ನಿಮಿತ್ತವಾಗಿ ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಜೋಡಗುಡಿಯ ಮರುಳಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಶಿವನ ಮೂರ್ತಿಗೆ ಪಂಚಾಮೃತ ಅಭಿಷೇಕ ಪೂಜೆ ಸಲ್ಲಿಸಲಾಯಿತು.
ಮಹಾಶಿವರಾತ್ರಿ ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬವಾಗಿದ್ದು, ಶಿವ ಮತ್ತು ಶಕ್ತಿ (ಪಾರ್ವತಿ) ಸಮ್ಮಿಲನದ ಸಂಕೇತವಾಗಿದೆ. ಅಜ್ಞಾನದ ಕತ್ತಲೆಯನ್ನು ಕಳೆದು ಜ್ಞಾನದ ಬೆಳಕನ್ನು ಪಡೆಯಲು, ಶಿವನು ಲಿಂಗರೂಪಿಯಾಗಿ ಅವತರಿಸಿದ ದಿನದ ನೆನಪಿನಲ್ಲಿ ಭಕ್ತರು ದಿನವೀಡೀ ಉಪವಾಸ, ಜಾಗರಣೆ ಹಾಗೂ ಬಿಲ್ವಪತ್ರೆ ಪೂಜೆ ಮೂಲಕ ಶ್ರದ್ಧಾಭಕ್ತಿಯಿಂದ ಶಿವನನ್ನು ಆರಾಧಿಸುತ್ತಾರೆ.ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು.
ಈ ಹಬ್ಬದಂದು ದಿನವೀಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ ಎಂದು ಹೇಳುತ್ತಾರೆ ಗ್ರಾಮದ ಹಿರಿಯರು.ಹಾಗೂ ಶಿವರಾತ್ರಿಯ ದಿನ ಇಂದು ದೇವರ ಪೂಜಾರಿ ರೇವಪ್ಪ ಮಲ್ಕಪ್ಪ ಪೂಜಾರಿ (ಕಡ್ಡಿ) ಅವರು ಗ್ಬೆರಾಮದ ಒಳೆತ್ಳತಿಗಾಗಿ ಮರುಳಸಿದ್ದೇಶ್ವರ ಗ್ರಾಮಕ್ಕೆ ಸಕಲ ಸಂಪತ್ತು ಮತ್ತು ಮಳೆ ಬೆಳೆ ಚೆನ್ನಾಗಿ ಆಗಲಿ ಎಂದು ಒಂದು ದಿನದ ಮಟ್ಟಿಗೆ ಮೌನ ಅನುಷ್ಠಾನ ಮಾಡುತ್ತಿದ್ದುದು ಕೂಡಾ ಕಂಡು ಬಂತು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 