ಮಹಾತ್ಮಾ ಗಾಂಧೀಜಿ ಜಯಂತಿ ನಿಮಿತ್ಯ ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ
ಕಾಗವಾಡ 04: ಶಿರಗುಪ್ಪಿಯ "ಅಮೋಲ ಜನಕಲ್ಯಾಣ ಫೌಂಡೇಶನ" ಮತ್ತು ಕಾಗವಾಡ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ 150ನೇ ಮಹಾತ್ಮಾ ಗಾಂಧಿಜಿಯವರ ಜಯಂತಿ ಮತ್ತು ಲಾಲಬಹಾದ್ದೂರ ಶಾಸ್ತ್ರಿಜಿಯವರ 115ನೇ ಜಯಂತಿ ಆಚರಿಸಿದರು.
ಬುಧವಾರ ರಂದು "ಅಮೋಲ ಜನಕಲ್ಯಾಣ ಫೌಂಡೇಶನ"ದ ವೈದ್ಯರಾದ ಡಾ. ಅಮೋಲ ಸರಡೆ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಪುಷ್ಪಲತಾ ಹಾಗೂ ಅವರ ಸಿಬ್ಬಂದಿಯವರು ಸಮುದಾಯ ಆರೋಗ್ಯ ಕೇಂದ್ರ ಪರಿಸರವನ್ನು ಸ್ವಚ್ಛಗೊಳಿಸಿ, ಮಹಾತ್ಮಾ ಗಾಂಧಿಜಿಯವರು ಸ್ವಚ್ಛತೆಗೆ ನೀಡಿರುವ ಸಂದೇಶದಂತೆ ಸೇವೆ ನೀಡಿದರು.
ದೇಶದ ಪ್ರಧಾನಿ ನರೇಂದ್ರ ಮೋದಿಜಿ ಇಂದಿನಿಂದ ಪ್ಲಾಸ್ಟಿಕ್ ಮುಕ್ತ ಭಾರತ ಮಾಡುವ ಪಣ ತೊಟ್ಟಿದ್ದರಿಂದ ಎಲ್ಲರು ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ ತೆಗೆದುಕೊಂಡರು.
ಸರಕಾರಿ ಆಸ್ಪತ್ರೆಯಲ್ಲಿ ಉಪಚಾರಿಸಿಕೊಳ್ಳುತ್ತಿರುವ ರೋಗಿಗಳಿಗೆ ಹಣ್ಣು ವಿತರಿಸಿ, ಜಯಂತಿಯನ್ನು ಆಚರಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಆಶಾ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 