ಮಹಾತ್ಮಾ ಗಾಂಧೀಜಿ ಜಯಂತಿ ನಿಮಿತ್ಯ ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ
ಕಾಗವಾಡ 04: ಶಿರಗುಪ್ಪಿಯ "ಅಮೋಲ ಜನಕಲ್ಯಾಣ ಫೌಂಡೇಶನ" ಮತ್ತು ಕಾಗವಾಡ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ 150ನೇ ಮಹಾತ್ಮಾ ಗಾಂಧಿಜಿಯವರ ಜಯಂತಿ ಮತ್ತು ಲಾಲಬಹಾದ್ದೂರ ಶಾಸ್ತ್ರಿಜಿಯವರ 115ನೇ ಜಯಂತಿ ಆಚರಿಸಿದರು.
ಬುಧವಾರ ರಂದು "ಅಮೋಲ ಜನಕಲ್ಯಾಣ ಫೌಂಡೇಶನ"ದ ವೈದ್ಯರಾದ ಡಾ. ಅಮೋಲ ಸರಡೆ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಪುಷ್ಪಲತಾ ಹಾಗೂ ಅವರ ಸಿಬ್ಬಂದಿಯವರು ಸಮುದಾಯ ಆರೋಗ್ಯ ಕೇಂದ್ರ ಪರಿಸರವನ್ನು ಸ್ವಚ್ಛಗೊಳಿಸಿ, ಮಹಾತ್ಮಾ ಗಾಂಧಿಜಿಯವರು ಸ್ವಚ್ಛತೆಗೆ ನೀಡಿರುವ ಸಂದೇಶದಂತೆ ಸೇವೆ ನೀಡಿದರು.
ದೇಶದ ಪ್ರಧಾನಿ ನರೇಂದ್ರ ಮೋದಿಜಿ ಇಂದಿನಿಂದ ಪ್ಲಾಸ್ಟಿಕ್ ಮುಕ್ತ ಭಾರತ ಮಾಡುವ ಪಣ ತೊಟ್ಟಿದ್ದರಿಂದ ಎಲ್ಲರು ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ ತೆಗೆದುಕೊಂಡರು.
ಸರಕಾರಿ ಆಸ್ಪತ್ರೆಯಲ್ಲಿ ಉಪಚಾರಿಸಿಕೊಳ್ಳುತ್ತಿರುವ ರೋಗಿಗಳಿಗೆ ಹಣ್ಣು ವಿತರಿಸಿ, ಜಯಂತಿಯನ್ನು ಆಚರಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಆಶಾ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 