ಮಹಾತ್ಮಾ ಗಾಂಧೀಜಿ ಜಯಂತಿ ನಿಮಿತ್ಯ ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ
ಕಾಗವಾಡ 04: ಶಿರಗುಪ್ಪಿಯ "ಅಮೋಲ ಜನಕಲ್ಯಾಣ ಫೌಂಡೇಶನ" ಮತ್ತು ಕಾಗವಾಡ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ 150ನೇ ಮಹಾತ್ಮಾ ಗಾಂಧಿಜಿಯವರ ಜಯಂತಿ ಮತ್ತು ಲಾಲಬಹಾದ್ದೂರ ಶಾಸ್ತ್ರಿಜಿಯವರ 115ನೇ ಜಯಂತಿ ಆಚರಿಸಿದರು.
ಬುಧವಾರ ರಂದು "ಅಮೋಲ ಜನಕಲ್ಯಾಣ ಫೌಂಡೇಶನ"ದ ವೈದ್ಯರಾದ ಡಾ. ಅಮೋಲ ಸರಡೆ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಪುಷ್ಪಲತಾ ಹಾಗೂ ಅವರ ಸಿಬ್ಬಂದಿಯವರು ಸಮುದಾಯ ಆರೋಗ್ಯ ಕೇಂದ್ರ ಪರಿಸರವನ್ನು ಸ್ವಚ್ಛಗೊಳಿಸಿ, ಮಹಾತ್ಮಾ ಗಾಂಧಿಜಿಯವರು ಸ್ವಚ್ಛತೆಗೆ ನೀಡಿರುವ ಸಂದೇಶದಂತೆ ಸೇವೆ ನೀಡಿದರು.
ದೇಶದ ಪ್ರಧಾನಿ ನರೇಂದ್ರ ಮೋದಿಜಿ ಇಂದಿನಿಂದ ಪ್ಲಾಸ್ಟಿಕ್ ಮುಕ್ತ ಭಾರತ ಮಾಡುವ ಪಣ ತೊಟ್ಟಿದ್ದರಿಂದ ಎಲ್ಲರು ಪ್ಲಾಸ್ಟಿಕ್ ಮುಕ್ತ ಮಾಡುವದಾಗಿ ಪ್ರತಿಜ್ಞೆ ತೆಗೆದುಕೊಂಡರು.
ಸರಕಾರಿ ಆಸ್ಪತ್ರೆಯಲ್ಲಿ ಉಪಚಾರಿಸಿಕೊಳ್ಳುತ್ತಿರುವ ರೋಗಿಗಳಿಗೆ ಹಣ್ಣು ವಿತರಿಸಿ, ಜಯಂತಿಯನ್ನು ಆಚರಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಆಶಾ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 