ಮಹಾವೀರ ಜಯಂತಿ ಕಾರ್ಯಕ್ರಮ
Mahavir Jayanti program
ಲೋಕದರ್ಶನ ವರದಿ
ಜಮಖಂಡಿ 02: ಜೈನ ಧರ್ಮದ 24ನೇ ತೀಥಂರ್ಕರರಾದ ಮಹಾವೀರರು ಅಹಿಂಸೆ ಮತ್ತು ಸತ್ಯದ ಮಾರ್ಗವನ್ನು ಬೋಧಿಸಿದವರು ಅವರು ಬದುಕು ಮತ್ತು ಬದುಕಲು ಬಿಡು ಎಂಬ ಸರ್ವಕಾಲಿಕ ಸಂದೇಶವನ್ನು ಸಾರಿದರು ಎಂದು ತಹಸೀಲ್ದಾರ ಅನೀಲ ಬಡಿಗೇರ ಹೇಳಿದರು.
ನಗರದ ತಾಲೂಕಾಡಳಿತ ಸಭಾ ಭವನದಲ್ಲಿ ನಡೆದ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಾವೀರರು ತಮ್ಮ ಜೀವನ ಕಾಲದ 30ನೇ ವಯಸ್ಸಿನಲ್ಲಿ ಸಂಸಾರ ಮತ್ತು ರಾಜ್ಯವನ್ನು ತ್ಯಜಿಸಿ ಸನ್ಯಾಸಿಯಾದರು. ಸುಮಾರು 12 ವರ್ಷಗಳ ಕಾಲ ತಪಸ್ಸು ಆಚರಿಸಿ ಕೈವಲ್ಯ ಜ್ಞಾನ ಪಡೆದರು. ಅವರ ತೋರಿಸಿದ ಮಾರ್ಗದಲ್ಲಿ ನಡೆದು ಜೀವನ ಸಾರ್ಥಕ ಮಾಡಿಕೊಳ್ಳಬೇಕು ಅಹಿಂಸಾ ಪರಮೋಧರ್ಮ ಎಂಬಂತೆ ಎಲ್ಲ ಪ್ರಾಣಿಗಳ ಮೇಲೆ ದಯೆ ಇರಬೇಕು ಎಂದರು.
ಸಮಾಜದ ಮುಖಂಡ ವರ್ಧಮಾನ ಮಹಾವೀರರ ಕುರಿತು ಮಾತನಾಡಿ, ಮೋಕ್ಷ ಪಡೆಯಲು ಸಮ್ಯಕ ದರ್ಶನ, ಜ್ಞಾನ, ಚಾರಿತ್ಯ್ರ ಹೊಂದಿರಬೇಕೆಂಬ ತತ್ವವನ್ನು ಬೋದಿಸಿದರು. ಅವರು ತೋರಿಸಿದ ಮಾರ್ಗದಲ್ಲಿ ನಡೆದು ಜೀವನ ಸಾರ್ಥಕ ಪಡಿಸಿಕೊಳ್ಳ ಬೇಕು ಎಂದರು.
ಮುಖಂಡ ದಯಾನಂದ ಶಿರಗಾರ, ರಾಜು ಕಡೊಲಿ, ಪಿ.ಪಿ.ನಂದಗಾಂವ, ವರ್ಧಮಾನ ಯಲಗುದ್ರಿ, ಚಂದ್ರಗುಪ್ತ ಬೆಳಗಲಿ, ಸುರೇಶ ನ್ಯಾಮಗೌಡ, ಮಯೂರ ಓಸ್ವಾಲ, ಆರ್.ಪಿ.ನ್ಯಾಮಗೌಡ, ಪದ್ದು ಅಕ್ಕಿವಾಟ, ಭರತೇಶ ಪಾಟೀಲ, ಸೀತಲ ನ್ಯಾಮಗೌಡ, ಬಸವರಾಜ ಆಲಗೂರ, ವಿನಯ ಸೇರಿದಂತೆ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 