ಮಹಾವೀರ ಜಯಂತಿ: ಮುಖ್ಯಮಂತ್ರಿ, ಗಣ್ಯರಿಂದ ಶುಭಾಶಯ
ಬೆಂಗಳೂರು, ಏ.6, ಅಹಿಂಸಾ ಪರಮೋ ಧರ್ಮಃ' ಎಂಬ ದಿವ್ಯ ತತ್ವವನ್ನು ಸಾರಿದ ಭಗವಾನ್ ವರ್ಧಮಾನ ಮಹಾವೀರ ಜಯಂತಿಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.ಅಹಿಂಸಾ ಪರಮೋ ಧರ್ಮಃ" ಎಂಬ ದಿವ್ಯ ತತ್ವವನ್ನು ಸಾರಿದ ಜೈನ ಧರ್ಮದ 24 ನೇಯ ಹಾಗೂ ಕೊನೆಯ ತೀರ್ಥಂಕರರಾದ ಭಗವಾನ್ ವರ್ಧಮಾನ ಮಹಾವೀರರ ಜಯಂತಿಯಂದು ಅವರ ಶಾಂತಿ ತತ್ವಗಳಿಗೆ ನಮನಗಳು. ಸರ್ವರಿಗೂ ಮಹಾವೀರ ಜಯಂತಿಯ ಶುಭಾಶಯಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ನಾಡಿನ ಜನತೆಗೆ ಮಹಾವೀರ ಜಯಂತಿ ಶುಭಾಶಯಗಳು. ಅಹಿಂಸೆಯೇ ಸರ್ವಶ್ರೇಷ್ಠ ಧರ್ಮ ಎಂದು ಸಾರಿದ ಭಗವಾನ್ ಮಹಾವೀರರ ತತ್ವಬೋಧನೆಗಳು ಬದುಕಿಗೆ ದಾರಿದೀಪವಾಗಿವೆ ಎಂದು ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಟ್ವೀಟ್ ಮಾಡಿ, ಜೈನಧರ್ಮದ ಇಪ್ಪತ್ತನಾಲ್ಕನೆಯ ತೀರ್ಥಂಕರರಾಗಿ, "ಅಹಿಂಸಾ ಪರಮೋ ಧರ್ಮಃ’’ ಎಂಬ ಮೂಲ ಮಂತ್ರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾಡಿಗೆ ಭಕ್ತಿ, ಸರಳತೆಯ ಬಗ್ಗೆ ತಿಳಿಸಿಕೊಟ್ಟ ಭಗವಾನ್ ಮಹಾವೀರರ ಜಯಂತಿಯಿಂದು. ನನ್ನ ನುಡಿ ನಮನಗಳು. ನಾಡಿಗೆ ಶುಭವಾಗಲಿ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 