15 ರಂದು ಮೈಲಾರಲಿಂಗೇಶ್ವರ ಜಾತ್ರಾ ಕಾರ್ಣಿಕೋತ್ಸವ
Mailaralingeshwara Fair Karnikotsava on the 15th
ಧಾರವಾಡ 11: ಸುಮಾರು 8ನೇ ಶತಮಾನದ ಪೂಜ್ಯ ಜಕಣಾಚಾರಿಗಳು ಧಾರವಾಡದ ವಿದ್ಯಾಗಿರಿಯಲ್ಲಿ ನಿರ್ಮಿಸಿದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೈಲಾರಲಿಂಗ ದೇವಸ್ಥಾನದ ಜಾತ್ರೆ ಹಾಗೂ ಕಾರ್ಣಿಕೋತ್ಸವವು ರವಿವಾರ ದಿನಾಂಕ: 15-02-2026 ರಂದು ಜರಗುವುದು ಮತ್ತು ಶನಿವಾರ ದಿನಾಂಕ: 14-02-2026 ರಂದು ಮಹಾಭಿಷೇಕ ಬಿಲ್ಲು ಪೂಜೆ, ಹಾಗೂ ರಾತ್ರಿ, ಭಜನೆ ಜಾಗರಣೆ ನಡೆಯುವದು. ಇದು 60ನೇ ಕಾರ್ಣಿಕೋತ್ಸವ ಆಗಿದ್ದು, ಮೈಲಾರಲಿಂಗೇಶ್ವರ ದೇವಸ್ಥಾನದ ವಂಶ ಪಾರಂಪರಿಕ ಕಾರ್ಣಿಕ ಪುರುಷ ಸಿರಿಮಲ್ಲ ತಿಪ್ಪಣ್ಣ ಶಿರೋಳ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರಗುವುದು. 15-02-2026 ರಂದು ರವಿವಾರ ಮಧ್ಯಾಹ್ನ 12 ಗಂಟೆಗೆ ಡೋಣಿ ಪೂಜೆ (ತುಂಬಿಸುವುದು), ಅನ್ನ ಸಂತರೆ್ಣ, ಸಂಜೆ 4:30 ಕ್ಕೆ ಮಹಾಮಂಗಳಾರತಿ ನಂತರ ಪಲ್ಲಕ್ಕಿ ಉತ್ಸವ ಕಾರ್ಣಿಕ ಸೇವೆ, ಸರಪಳಿ ಸೇವೆ ಜರಗುವವು, ಕಾರಣ ಸಕಲ ಸದ್ಭಕ್ತರು ತನುಮನದಿಂದ ಸೇವೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕಾರ್ಣಿಕ ಪುರುಷ ಸಿರಿಮಲ್ಲ ತಿಪ್ಪಣ್ಣ ಶಿರೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 