15 ರಂದು ಮೈಲಾರಲಿಂಗೇಶ್ವರ ಜಾತ್ರಾ ಕಾರ್ಣಿಕೋತ್ಸವ
Mailaralingeshwara Fair Karnikotsava on the 15th
ಧಾರವಾಡ 11: ಸುಮಾರು 8ನೇ ಶತಮಾನದ ಪೂಜ್ಯ ಜಕಣಾಚಾರಿಗಳು ಧಾರವಾಡದ ವಿದ್ಯಾಗಿರಿಯಲ್ಲಿ ನಿರ್ಮಿಸಿದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೈಲಾರಲಿಂಗ ದೇವಸ್ಥಾನದ ಜಾತ್ರೆ ಹಾಗೂ ಕಾರ್ಣಿಕೋತ್ಸವವು ರವಿವಾರ ದಿನಾಂಕ: 15-02-2026 ರಂದು ಜರಗುವುದು ಮತ್ತು ಶನಿವಾರ ದಿನಾಂಕ: 14-02-2026 ರಂದು ಮಹಾಭಿಷೇಕ ಬಿಲ್ಲು ಪೂಜೆ, ಹಾಗೂ ರಾತ್ರಿ, ಭಜನೆ ಜಾಗರಣೆ ನಡೆಯುವದು. ಇದು 60ನೇ ಕಾರ್ಣಿಕೋತ್ಸವ ಆಗಿದ್ದು, ಮೈಲಾರಲಿಂಗೇಶ್ವರ ದೇವಸ್ಥಾನದ ವಂಶ ಪಾರಂಪರಿಕ ಕಾರ್ಣಿಕ ಪುರುಷ ಸಿರಿಮಲ್ಲ ತಿಪ್ಪಣ್ಣ ಶಿರೋಳ ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರಗುವುದು. 15-02-2026 ರಂದು ರವಿವಾರ ಮಧ್ಯಾಹ್ನ 12 ಗಂಟೆಗೆ ಡೋಣಿ ಪೂಜೆ (ತುಂಬಿಸುವುದು), ಅನ್ನ ಸಂತರೆ್ಣ, ಸಂಜೆ 4:30 ಕ್ಕೆ ಮಹಾಮಂಗಳಾರತಿ ನಂತರ ಪಲ್ಲಕ್ಕಿ ಉತ್ಸವ ಕಾರ್ಣಿಕ ಸೇವೆ, ಸರಪಳಿ ಸೇವೆ ಜರಗುವವು, ಕಾರಣ ಸಕಲ ಸದ್ಭಕ್ತರು ತನುಮನದಿಂದ ಸೇವೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಕಾರ್ಣಿಕ ಪುರುಷ ಸಿರಿಮಲ್ಲ ತಿಪ್ಪಣ್ಣ ಶಿರೋಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 