ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ
Maintaining cleanliness is everyone's responsibility.
ಲೋಕದರ್ಶನ ವರದಿ
ಹೂವಿನ ಹಡಗಲಿ 12 : ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿಪಟ್ಟಣದ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ, ಗೃಹಿಣಿಯರು ಸಹಕರಿಸಿರಿ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಪ್ಪ ಜಿ ಹೇಳಿದರು. ಇಲ್ಲಿನ ಪುರಸಭೆ ವತಿಯಿಂದ ಪಟ್ಟಣದ 13 ಹಾಗೂ 20 ನೇ ವಾರ್ಡಿನ ಮಹಿಳೆಯರಿಗೆ ಗುರುವಾರ ಹೊಳಗುಂದಿ ರಸ್ತೆಯಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಸಿಕಸ, ಒಣಕಸ ಅಪಾಯಕಾರಿ ತಾಜ್ಯ ವಿಂಗಡನೆಯ ಕುರಿತು ಕಿರಿಯ ಆರೋಗ್ಯ ನೀರೀಕ್ಷಕ ಎಂ ಸೋಮಶೆಖರ್ ಉಪಯುಕ್ತ ಮಾಹಿತಿ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಜಿ ಹನುಮಂತಪ್ಪ ಮಾತನಾಡಿ ಏಕ ಬಳಕೆಯ ಪ್ಲಾಸ್ಟಿಕ್ ನಿಂದಾಗುವ ಅಪಾಯದ ಬಗ್ಗೆ ವಿವರಿಸಿದರು. ಎರೆಹುಳು ಗೊಬ್ಬರ ತಯಾರಿಕಾ ಘಟಕ ಹಾಗೂ ಹಸಿ ಕಸದಿಂದ ಗೊಬ್ಬರ ತಯಾರಿಸುವುದು ಮತ್ತು ಮರುಬಳಕೆ ಮಾಡುವ ವಿಧಾನ ವಸ್ತುಗಳು ಕುರಿತು ಮಹಿಳೆಯರಿಗೆ ತಿಳಿಸಿದರು.ಕಸೆ ವಿಲೇವಾರಿ ಘಟಕದ ಉತ್ತಂಗಿ ನಿಂಗಪ್ಪ, ಪುರಸಭೆ ಸಿಬ್ಬಂದಿ ದೀಪಾ ಅಂಗಡಿ, ಸಂಜೀವಿನಿ, ಮಂಜುಳಾ, ರೇಖಾ, ಪದ್ಮಾ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 