ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ
Maintaining cleanliness is everyone's responsibility.
ಲೋಕದರ್ಶನ ವರದಿ
ಹೂವಿನ ಹಡಗಲಿ 12 : ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿಪಟ್ಟಣದ ಸ್ವಚ್ಛತೆ ಕಾಪಾಡುವುದು ಎಲ್ಲರ ಜವಾಬ್ದಾರಿ, ಗೃಹಿಣಿಯರು ಸಹಕರಿಸಿರಿ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಪ್ಪ ಜಿ ಹೇಳಿದರು. ಇಲ್ಲಿನ ಪುರಸಭೆ ವತಿಯಿಂದ ಪಟ್ಟಣದ 13 ಹಾಗೂ 20 ನೇ ವಾರ್ಡಿನ ಮಹಿಳೆಯರಿಗೆ ಗುರುವಾರ ಹೊಳಗುಂದಿ ರಸ್ತೆಯಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಸಿಕಸ, ಒಣಕಸ ಅಪಾಯಕಾರಿ ತಾಜ್ಯ ವಿಂಗಡನೆಯ ಕುರಿತು ಕಿರಿಯ ಆರೋಗ್ಯ ನೀರೀಕ್ಷಕ ಎಂ ಸೋಮಶೆಖರ್ ಉಪಯುಕ್ತ ಮಾಹಿತಿ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ಜಿ ಹನುಮಂತಪ್ಪ ಮಾತನಾಡಿ ಏಕ ಬಳಕೆಯ ಪ್ಲಾಸ್ಟಿಕ್ ನಿಂದಾಗುವ ಅಪಾಯದ ಬಗ್ಗೆ ವಿವರಿಸಿದರು. ಎರೆಹುಳು ಗೊಬ್ಬರ ತಯಾರಿಕಾ ಘಟಕ ಹಾಗೂ ಹಸಿ ಕಸದಿಂದ ಗೊಬ್ಬರ ತಯಾರಿಸುವುದು ಮತ್ತು ಮರುಬಳಕೆ ಮಾಡುವ ವಿಧಾನ ವಸ್ತುಗಳು ಕುರಿತು ಮಹಿಳೆಯರಿಗೆ ತಿಳಿಸಿದರು.ಕಸೆ ವಿಲೇವಾರಿ ಘಟಕದ ಉತ್ತಂಗಿ ನಿಂಗಪ್ಪ, ಪುರಸಭೆ ಸಿಬ್ಬಂದಿ ದೀಪಾ ಅಂಗಡಿ, ಸಂಜೀವಿನಿ, ಮಂಜುಳಾ, ರೇಖಾ, ಪದ್ಮಾ ಇತರರು ಇದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 