ಹದಿಹರೆಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಿ: ಜ್ಯೋತಿ
ಗುಳೇದಗುಡ್ಡ18: ಹದಿಹರೆಯದ ವಯಸ್ಸಿನಲ್ಲಿ ಹೆಣ್ಣು ಮಕ್ಕಳಿಗೆ ಸಾಕಷ್ಟು ದೈಹಿಕ ಹಾಗೂ ಮಾನಸಿಕ ಬದಲಾವಣೆಗಳಾಗುತ್ತವೆ. ಅವುಗಳ ಬಗೆಗೆ ತಿಳಿದುಕೊಂಡು ವಿದ್ಯಾಥರ್ಿನಿಯರು ತಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಬೇಕೆಂದು ಪಟ್ಟಣದ ಸಕರ್ಾರಿ ಆಸ್ಪತ್ರೆಯ ಐಸಿಟಿಸಿ ಘಟಕದ ಆಪ್ತ ಸಮಾಲೋಚಕಿ ಜ್ಯೋತಿ ಮೆನಸಿನಕಾಯಿ ಹೇಳಿದರು.
ಮಂಗಳವಾರ ಅವರು ಸ್ಥಳಿಯ ಪಿಇ ಟ್ರಸ್ಟಿನ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹದಿಹರೆಯದವರ ಆರೋಗ್ಯ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ಪ್ರೌಢ ಶಾಲೆಯ ವಿದ್ಯಾಥರ್ಿನಿಯರಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಹದಿಹರೆಯದ ವಯಸ್ಸಿನಲ್ಲಿ ಉಂಟಾಗುವ ದೈಹಿಕ, ಮಾನಸಿಕ, ಬೆಳವಣಿಗೆಯಿಂದ ಗೊಂದಲಕ್ಕೊಳಗಾಗದೇ ವೈಯಕ್ತಿಕ ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ ಹಾಗೂ ಯೋಗದಿಂದ ದೈಹಿಕ ಹಾಗೂ ಮಾನಸಿಕವಾಗಿ ಸಧೃಡವಾಗಬೇಕೆಂದು ಹೇಳಿ, ರಕ್ತ ಹೀನತೆಯಿಂದ ಕಾಡುವ ಹೊಟ್ಟೆ ನೋವು, ಕಾಮಾಲೆ, ಅಲ್ಲದೇ ಎಚ್ಐವಿ, ಏಡ್ಸದಂತಹ ಮಾರಕ ರೋಗಗಳ ಬಗ್ಗೆ ಸಮಗ್ರವಾಗಿ ತಿಳಿಸಿದರು. ವಿದ್ಯಾಥರ್ಿನಿಯರ ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರು ಹಾಜರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 