ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಚಿಂಚಲಿ-ರಾಯಬಾಗ ಮುಖ್ಯ ರಸ್ತೆ ಜಲಾವೃತ
ಲೋಕದರ್ಶನ ವರದಿ
ರಾಯಬಾಗ 22: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಜಮೀನುಗಳಿಂದ ಅಪಾರ ಪ್ರಮಾಣದಲ್ಲಿ ನೀರು ರಸ್ತೆ ಮೇಲೆ ಬಂದು ಮಂಗಳವಾರ ಬೆಳಿಗ್ಗೆ ಚಿಂಚಲಿ-ರಾಯಬಾಗ ಮುಖ್ಯ ರಸ್ತೆಯ ಹಾಲಹಳ್ಳದ ಸೇತುವೆ ಜಲಾವೃತಗೊಂಡು ಸಂಚಾರ ಬಂದ್ ಆಗಿದೆ. ನೀರು ಹರಿಯುವ ರಭಸಕ್ಕೆ ಸೇತುವೆಯ ತಡೆಗೋಡೆ ಕೊಚ್ಚಿ ಹೋಗಿದೆ.
ಸೇತುವೆ ಜಲಾವೃತದಿಂದಾಗಿ ಕುಡಚಿ, ಸಿದ್ದಾಪೂರ, ಖೇಮಲಾಪೂರ, ಪರಮಾನಂದವಾಡಿ, ಸುಟ್ಟಟ್ಟಿ, ನಿಲಜಿ, ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತಾಲೂಕು ಕೇಂದ್ರ ರಾಯಬಾಗಕ್ಕೆ ಹೋಗಲು ತೊಂದರೆಯಾಗಿದೆ. ಚಿಂಚಲಿ ಗ್ರಾಮಸ್ಥರು ಸೇತುವೆ ಮೂಲಕ ಸಾಗಿದರೆ 10 ಕಿ.ಮೀ. ದೂರವಿದ್ದ ರಾಯಬಾಗ ಈಗ ಮೊರಬ ನಿಡಗುಂದಿ ಮೂಲಕ 20 ಕಿ.ಮೀ. ದೂರ ಸಂಚರಿಸಬೇಕಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 