ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲ್ಲಿಸಿ: ಕೃಷ್ಣಗೌಡ ಪಾಟೀಲ
Make Congress win for development: Krishnagowda Patil
ಬಾಗಲಕೋಟ 02 : 2023ರಿಂದ ಇಲ್ಲಿಯವರೆಗೆ (ಕಾಂಗ್ರೆಸ್ ಸರ್ಕಾರದಲ್ಲಿ) ಬಾಗಲಕೋಟ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಹೀಗಾಗಿ ಮತದಾರರು ಬಾಗಲಕೋಟ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವಂತೆ ಯುವ ಕಾಂಗ್ರೆಸ್ ಸಮಿತಿ ಗದಗ ಜಿಲ್ಲಾಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಮನವಿ ಮಾಡಿದರು.ಬಾಗಲಕೋಟ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಶಿರೂರ ಗ್ರಾಮದಲ್ಲಿ ಮತಯಾಚಣೆ ಮಾಡಿ ಅವರು ಮಾತನಾಡಿದರು.
ಬಾಗಲಕೋಟ ಜಿಲ್ಲೆಯ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ 425 ಕೋಟಿ ರೂ. ಅನುದಾನ (150 ಎಂಬಿಬಿಎಸ್ ಸೀಟ್), ಬಾದಾಮಿ ತಾಲೂಕು ಕುಳಗೇರಿ ಕ್ರಾಸ್ ಬಳಿ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ಸ್ಥಾಪನೆಗೆ ಅನುದಾನ, ಯುಕೆಪಿ ಹಂತ-3 ಕಾಮಗಾರಿ ಮತ್ತು ರೈತರ ಪರಿಹಾರಕ್ಕೆ 2026 ಬಜೆಟ್ನಲ್ಲಿ 3,000 ಕೋಟಿ ರೂ. ಮೀಸಲು ಇಡಲಾಗಿದೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸ್ಥಾಪನೆಗೆ ಅನುಮೋದನೆ, ಜಿಲ್ಲಾ ಆಸ್ಪತ್ರೆಯಲ್ಲಿ ಋಊಐ ಪ್ರಯೋಗಾಲಯ ಮತ್ತು ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳ ಸ್ಥಾಪನೆ, ಕೆರೂರು ಏತ ನೀರಾವರಿ ಯೋಜನೆಗೆ ಆದ್ಯತೆ ನೀಡಿದೆ.
ಮೆಳ್ಳಿಗೇರಿ-ಹಳಗಲಿ, ಸಾಸಲಟ್ಟಿ-ಶಿವಲಿಂಗೇಶ್ವರ-ಶಿರೂರು ಮತ್ತು ಹಣವಾಲ ಏತ ನೀರಾವರಿ ಯೋಜನೆಗಳಿಗೆ ಬಜೆಟ್ ಅನುದಾನ ಸಹ ನೀಡಲಾಗಿದೆ. ವಿಜ್ಞಾನ ಕೇಂದ್ರ ಮತ್ತು ತಾರಾಲಯ ಸ್ಥಾಪನೆಗೆ ಅನುಮೋದನೆ ನೀಡಿದೆ. ಅಒಋಕ ಅಡಿಯಲ್ಲಿ 25 ಕೋಟಿ ರೂ. ವಿಶೇಷ ಅನುದಾನ (ರಸ್ತೆ, ಚರಂಡಿ, ನಾಗರಿಕ ಸೌಲಭ್ಯಗಳಿಗೆ), ಸಹಕಾರಿ ಬ್ಯಾಂಕುಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ದಾಖಲೆ ಪ್ರಮಾಣದ ರೈತರಿಗೆ ಸಾಲ ಸೌಲಭ್ಯ ನೀಡಲಾಗಿದೆ ಎಂದು ಹೇಳಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 