ಮಕ್ಕಳಲ್ಲಿ ಪ್ರಾಥಮಿಕ ಹಂತದಲ್ಲಿ ವಿಜ್ಞಾನ ಬಗ್ಗೆ ಆಸಕ್ತಿ ಬೆಳೆಸಿ
ಲೋಕದರ್ಶನವರದಿ
ಗುಳೇದಗುಡ್ಡ: ಜಗತ್ತು ಎಷ್ಟು ವೇಗವಾಗಿ ಬದಲಾಗುತ್ತಿದೆ ಎಂದರೆ ಅದಕ್ಕೆ ಕಾರಣ ವಿಜ್ಞಾನ. ಇಂದು ವಿಜ್ಞಾನವಿಲ್ಲದ ಜ್ಞಾನ ಅಪೂರ್ಣವೆಂದೇ ಅರ್ಥ. ಆದ್ದರಿಂದ ಮಕ್ಕಳು ಪ್ರಾಥಮಿಕ ಹಂತದಿಂದಲೇ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಬೇಕು. ಅಂದಾಗ ಮಾತ್ರ ಅವರ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಜಿ.ಪಂ. ಮಾಜಿಉಪಾಧ್ಯಕ್ಷ ಹಣಮಂತ ಅಮಾವಿನಮರದ ಹೇಳಿದರು.
ಅವರು ಸಮೀಪದ ಕೋಟೆಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಹಬ್ಬದ ನಿಮಿತ್ತಯ ಹಮ್ಮಿಕೊಂಡ ವಿಜ್ಞಾನ ಮತ್ತು ಸಾಂಸ್ಕೃತಿಕ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೋಟೆಕಲ್ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀಬಾಯಿ ಸೀತಿಮನಿ ವಿಜ್ಞಾನ ಜಾಥಾಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಜ್ಯ ವಿಜ್ಞಾನ ಪರಿಷತ್ ಸಂಪನ್ಮೂಲ ವ್ಯಕ್ತಿ ವಿ.ಬಿ.ಪಾಟೀಲ ಮಾತನಾಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದಪ್ಪ ಮಾವಿನಮರದ ಅಧ್ಯಕ್ಷತೆವಹಿಸಿದ್ದರು. ಸಿಆರ್ಪಿ ಸಂಯೋಜಕ ಎಸ್.ಪಿ.ಉದಗಟ್ಟಿ, ಕವಿತಾ ಹುಚ್ಚೇಶ್ವರಮಠ, ಉಮಾ ತಳವಾರ, ಮಂಜುಳಾ ಪಾತ್ರೋಟಿ, ಮಂಜುಳಾ ಕಮತರ, ಸ್ವಪ್ನಾ ಕಾರೂಡಗಿಮಠ, ಪ್ರಾಥಮಿಕ ಶಾಲಾ ಶಿಕ್ಷಕ ಟಿ.ಎನ್.ಕಂಕಣವಾಡಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ಸಿ.ಬೆಟಗೇರಿ, ಮಹಿಳಾ ಸಂಪಣ್ಮೂಲ ಶಿಕ್ಷಕಿಯರಾದ ಭಾಗೀರತಿ ಆಲೂರ, ಗೀತಾ ಲೋಣಿ, ಶಿವಲೀಲಾ ಅಳೆಹೊನ್ನಪ್ಪನವರ್, ಮಧು ಕಳ್ಳಿಗುಡ್ಡ, ಶಿಕ್ಷಕ ರವಿ ಬೇನಾಳ ಹಾಗೂ ಸಿದ್ದಪ್ಪ ಮೆಣಸಗಿ ಮತ್ತಿತರರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 